Advertisement

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾದ ಪತಿ

11:45 PM Mar 06, 2023 | Team Udayavani |

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಬ್ಬರಗುಂಟೆಯಲ್ಲಿ ಕೌಟುಂಬಿಕ ಕಲಹದಿಂದ ಪತಿ ತನ್ನ ಪತ್ನಿಯ ಎರಡು ಕೈಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

Advertisement

ಗೊಬ್ಬರಗುಂಟೆ ಗ್ರಾಮದ ಮುನಿಕೃಷ್ಣ(48) ಹಲ್ಲೆ ನಡೆಸಿರುವ ವ್ಯಕ್ತಿ. ಚಂದ್ರಮ್ಮ(45) ಗಾಯಗೊಂಡಿರುವ ಮಹಿಳೆ.

ಚಂದ್ರಮ್ಮ ಅವರ ಎರಡೂ ಕೈಗಳಿಗೆ ಗಂಭೀರವಾದ ಗಾಯವಾಗಿದ್ದು, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿಗೆ ಮೂವರು ಮಕ್ಕಳಿದ್ದಾರೆ. ಗಂಡನ ಕಿರುಕುಳದಿಂದ ಬೇಸತ್ತಿದ್ದ ಚಂದ್ರಮ್ಮ ತನ್ನ ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ಆರು ತಿಂಗಳಿನಿಂದ ಪ್ರತ್ಯೇಕವಾಗಿ ವಾಸವಾಗಿದ್ದರು. ತಾಯಿ ಮತ್ತು ಮಗಳು ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಸೋಮವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾದ ಚಂದ್ರಮ್ಮ ಅವರ ಮೇಲೆ ಮುನಿಕೃಷ್ಣ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಎರಡೂ ಕೈಗಳಿಗೆ ಗಂಭೀರವಾದ ಗಾಯವಾದ್ದು, ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪತಿ-ಪತ್ನಿಯ ನಡುವೆ ಆಗ್ಗಾಗ್ಗೆ ಜಗಳ ನಡೆಯುತ್ತಿತು. ಗ್ರಾಮಸ್ಥರು ಸೇರಿದಂತೆ ಪಂಚಾಯಿತಿಯವರು ಬುದ್ದಿವಾದ ಹೇಳಿದ್ದರು. ಆದರೂ ತನ್ನ ಹೆಂಡತಿ, ಮಕ್ಕಳ ಜೊತೆ ಗಲಾಟೆ ಮಾಡುವುದನ್ನು ಮುನಿಕೃಷ್ಣ ಮುಂದುರೆಸಿದ್ದರು ಎನ್ನಲಾಗಿದೆ.

Advertisement

ವಿಜಯಪುರ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವಣ್ಣ, ಸುದೀಪ್ ಅವರೊಟ್ಟಿಗೆ ಸಿನಿಮಾ ಕನಸಿನಲ್ಲೂ ಯೋಚಿಸಿರಲಿಲ್ಲ: ಉಪೇಂದ್ರ

Advertisement

Udayavani is now on Telegram. Click here to join our channel and stay updated with the latest news.

Next