Advertisement

Lok Sabha Elections: ಡಾ.ಸಿ.ಎನ್‌.ಮಂಜುನಾಥ್‌ ಸ್ಪರ್ಧೆ ಬಹುತೇಕ ಖಚಿತ: ಸಿಪಿವೈ

09:21 PM Mar 12, 2024 | Team Udayavani |

ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಹೆಸರು ಬಹುತೇಕ ಅಂತಿಮವಾಗಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಅಂತಿಮ ಪಟ್ಟಿ ಅನುಮೋದನೆ ಮಾಡಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

Advertisement

ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಮೈತ್ರಿ ಮುಖಂಡರು ಇದಕ್ಕೆ ಒಮ್ಮತ ಸೂಚಿಸಿದ್ದಾರೆ. ಅವರು ಅಭ್ಯರ್ಥಿ ಆಗೋದು ಸೂಕ್ತ ಅಂತ ತೀರ್ಮಾನ ಮಾಡಿದ್ದೇವೆ. ಈ ಸಂದೇಶವನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿ ವರಿಷ್ಠರಿಗೆ ತಿಳಿಸಲಿದ್ದಾರೆ. ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ ಆಗುತ್ತದೆ ಎಂದರು.

ಡಾ.ಮಂಜುನಾಥ್‌ ಸ್ಪರ್ಧೆಗೆ ಒಪ್ಪಿದ್ದಾರೆ: ಡಾ.ಸಿ.ಎನ್‌.ಮಂಜುನಾಥ್‌ ಅವರ ಜತೆಗೆ ನಾನೂ ಮಾತನಾಡಿದ್ದೇನೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಪ್ರಾರಂಭದಲ್ಲಿ ಅವರ ಶ್ರೀಮತಿ ಸ್ವಲ್ಪ ಅಳಕು ತೋರಿಸಿದರು. ಬಳಿಕ ಕುಮಾರಸ್ವಾಮಿ ಅವರು ಒಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಸಿಪಿವೈ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next