Advertisement

Bengaluru: ಮಾತನಾಡಿಸದ್ದಕ್ಕೆ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆಗೈದ ಮಲ ತಂದೆ!

03:32 AM Aug 26, 2024 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮಲ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ.

Advertisement

ಉತ್ತರಾಖಂಡದ ಮೂಲದ ಸುಮಿತ್‌ ಮೋಹನ್‌(35) ಹತ್ಯೆಗೈದವ. ಆರೋಪಿ ತನ್ನ 16 ಮತ್ತು 15 ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆಗೈದು ಪರಾರಿಯಾಗಿದ್ದು, ಆತನ ಪತ್ತೆಗಾಗಿ 3 ವಿಶೇಷ ತಂಡ ರಚಿಸಲಾಗಿದೆ. ಶನಿವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ಈ ದುರ್ಘ‌ಟನೆ ನಡೆದಿದೆ.

ಆರೋಪಿ ಸುಮಿತ್‌ ಮೋಹನ್‌, ನಗರದಲ್ಲಿ ಫ‌ುಡ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಈತನ ಪತ್ನಿ ಅನಿತಾ ಉತ್ತರ ಪ್ರದೇಶದ ಮೂಲದವರಾಗಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈಕೆ ಮೊದಲ ಪತಿಯಿಂದ ವಿಚ್ಛೇದನ ಪಡೆದುಕೊಂಡು, ಕೆಲ ವರ್ಷಗಳ ಹಿಂದೆ ಆರೋಪಿಯನ್ನು ಎರಡನೇ ಮದುವೆಯಾಗಿದ್ದರು. ಈತನನ್ನು ಮದುವೆಯಾಗುವುದಕ್ಕೂ ಮುನ್ನ ಅನಿತಾಗೆ ಇಬ್ಬರು ಹೆಣ್ಣುಮಕ್ಕಳಿದ್ದರು.

ದಂಪತಿ ಕಾವೇರಿ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಮೃತ ಮಕ್ಕಳು ಸಮೀಪದ ಶಾಲೆಯಲ್ಲಿ ಓದುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಆರೋಪಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಿದ್ದ. ಅವರಿಗೆ ಬೇಕಾದ ಎಲ್ಲ ವಸ್ತುಗಳನ್ನೂ ಕೊಡಿಸುತ್ತಿದ್ದ. ಆದರೆ, ಎರಡು ತಿಂಗಳಿಂದ ಈತನನ್ನು ಮಾತನಾಡಿಸುತ್ತಿರಲಿಲ್ಲ. ಆದರೆ, ಮನೆ ಸಮೀಪದ ಕೆಲವರನ್ನು ಮಾತ್ರ ಮಾತನಾಡಿಸುತ್ತಿದ್ದರು.

ಇದೇ ವಿಚಾರಕ್ಕೆ ಮನೆಯಲ್ಲಿ ಜಗಳ ನಡೆದಿತ್ತು. ಶನಿವಾರ ಮಧ್ಯಾಹ್ನ ಕೂಡ ಆರೋಪಿ ಮಕ್ಕಳ ಜತೆಗೆ ಗಲಾಟೆ ನಡೆದಿದ್ದು, ಅದು ವಿಕೋಪಕ್ಕೆ ಹೋದಾಗ ಮನೆಯಲ್ಲಿದ್ದ ಮಾರಕಾಸ್ತ್ರಗಳಿಂದ ಇಬ್ಬರ ಮಕ್ಕಳ ಕುತ್ತಿಗೆಗೆ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

Advertisement

“ಯಾವ ಕಾರಣಕ್ಕೆ ಮಕ್ಕಳ ಹತ್ಯೆಯಾಗಿದೆ ಎಂಬುದು ಗೊತ್ತಾಗಿಲ್ಲ. ಪ್ರಾಥಮಿಕ ಮಾಹಿತಿ ಕೌಟುಂಬಿಕ ವಿಚಾರ ಎಂಬುದು ಗೊತ್ತಾಗಿದೆ. ಆರೋಪಿ ಬಂಧಿಸಿದ ಬಳಿಕವೇ ನಿಖರ ಕಾರಣ ಗೊತ್ತಾಗಲಿದೆ. ಮನೆ ಅಕ್ಕಪಕ್ಕದಲ್ಲಿ ಅಳವಡಿಸಿರುವ ಸಿಸಿ ಕೆಮೆರಾವನ್ನು ಪರಿಶೀಲಿಸಲಾಗುತ್ತಿದೆ.”  – ವಿ.ಜೆ. ಸಜಿತ್‌, ಈಶಾನ್ಯ ವಿಭಾಗದ ಡಿಸಿಪಿ.

Advertisement

Udayavani is now on Telegram. Click here to join our channel and stay updated with the latest news.

Next