Advertisement

Bengaluru ಪಾರ್ಟಿ ಮುಗಿಸಿ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ರೇಪ್!; ಏನಿದು ಪ್ರಕರಣ?

05:29 PM Aug 18, 2024 | Team Udayavani |

ಬೆಂಗಳೂರು: ಕೋಲ್ಕತಾ ಟ್ರೈನಿ ವೈದ್ಯೆಯ ಮೇಲೆ ಅ*ತ್ಯಾಚಾರ ನಡೆಸಿ ಹ*ತ್ಯೆಗೈದಿರುವ ಘಟನೆ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಭಾನುವಾರ (ಆ.18) ನಸುಕಿನ ವೇಳೆ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದೆ.

Advertisement

ಹೆಚ್ಚುವರಿ ಪೊಲೀಸ್ ಕಮಿಷನರ್ (ಪೂರ್ವ ವಲಯ) ರಮಣ್ ಗುಪ್ತಾ ಅವರು ಪ್ರಕರಣದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ‘ರಾತ್ರಿ 1.30 ರ( ಭಾನುವಾರ,ಆ.18 ) ವೇಳೆಗೆ ಪಾರ್ಟಿ ಮುಗಿಸಿಕೊಂಡುಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಅಪರಿಚಿತ ಬೈಕರ್‌ ಬಳಿ ಡ್ರಾಪ್ ನೀಡಲು ಕೇಳಿಕೊಂಡಿದ್ದಾಳೆ. ಆತ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೃತ್ಯ ಎಸಗಿದ್ದಾನೆ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಹೊರ ರಾಜ್ಯದ ವಿದ್ಯಾರ್ಥಿನಿ ಕೋರಮಂಗಲದಲ್ಲಿ ಗೆಟ್ ಟುಗೆದರ್ ಮುಗಿಸಿ ಹೆಬ್ಬಗೋಡಿಗೆ ಮನೆಗೆ ಮರಳುತ್ತಿದ್ದಳು. ಆಕೆ ಲಿಫ್ಟ್ ಕೇಳಿದಾಗ ವ್ಯಕ್ತಿಯೊಬ್ಬ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿ ಆಕೆಯ ಮೇಲೆ ಅ*ತ್ಯಾಚಾರ ಎಸಗಿದ್ದಾನೆ. ನಾವು ಅ*ತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ” ಎಂದು ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅ*ತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು, ಆರೋಪಿಯ ಗುರುತು ಪತ್ತೆ ಮಾಡಲಾಗಿದ್ದು,ಐದು ತಂಡ ರಚಿಸಲಾಗಿದೆ. ಶೀಘ್ರವೇ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾರ್ಟಿ ಮುಗಿಸಿ ಹೋಗುವ ವೇಳೆ ಸ್ನೇಹಿತರ ಕಾರು ಆಟೋಗೆ ತಗುಲಿದ್ದು ಫೋರಂ ಮಾಲ್ ಬಳಿ ವಿದ್ಯಾರ್ಥಿನಿಯ ಸ್ನೇಹಿತರು ಮತ್ತು ಆಟೋ ಚಾಲಕರ ನಡುವೆ ಗಲಾಟೆ ನಡೆದಿದೆ. ಇದೇ ವೇಳೆ ಸ್ಥಳಕ್ಕೆ ಹೊಯ್ಸಳ ವಾಹನ ಕೂಡ ಬಂದಿತ್ತು. ಆ ಬಳಿಕ ಯುವತಿ ಬೈಕ್ ನಲ್ಲಿ ಡ್ರಾಪ್ ತೆಗೆದುಕೊಂಡು ಹೊರಟಿದ್ದು, ಮಾರ್ಗ ಮಧ್ಯ ಇಳಿದು ಮತ್ತೊಂದು ಬೈಕ್ ನಲ್ಲಿ ತೆರಳಿದ್ದಳು ಎಂದು ತಿಳಿದು ಬಂದಿದೆ.

ಕೃತ್ಯ ನಡೆವ ವೇಳೆ ವಿದ್ಯಾರ್ಥಿನಿ ಮೊಬೈಲ್ ಎಮರ್ಜೆನ್ಸಿ SOS ಬಟನ್ ಒತ್ತಿದ್ದಾಳೆ. ತಂದೆ ಮತ್ತು ಸ್ನೇಹಿತೆಯ ನಂಬರ್ ಗೆ ತುರ್ತು ಕರೆ ಹೋಗಿದ್ದು. ​ತಂದೆ ಮಗಳ ಗೆಳತಿಗೆ ಕರೆ ಮಾಡಿದ್ದಾರೆ. ಬಳಿಕ ಸ್ನೇಹಿತರು ಸ್ಥಳಕ್ಕೆ ಬಂದಾಗ ಸಂತ್ರಸ್ತೆಯ ಸ್ಥಿತಿ ಶೋಚನೀಯವಾಗಿದ್ದು, ಕೃತ್ಯ ಎಸಗಿದವ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂತ್ರಸ್ತೆ ಬೆತ್ತಲೆಯಾಗಿ ಲಾರಿಯ ಹಿಂಭಾಗದಲ್ಲಿ ಬಿದ್ದಿದ್ದು, ಆಕೆಯ ಮೇಲೆ ಒಂದು ಜಾಕೆಟ್ ಮಾತ್ರ ಇತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ದೌಡಾಯಿಸಿ ಬಂದ ಇಬ್ಬರು ಸ್ನೇಹಿತರು ಆಕೆಯ ದೇಹವನ್ನು ಬಟ್ಟೆಯಿಂದ ಮುಚ್ಚಿ ಬೊಮ್ಮಸಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ಬಿಜೆಪಿ ಖಂಡನೆ
ಘಟನೆಯನ್ನು ಬಿಜೆಪಿ ಖಂಡಿಸಿದ್ದು ” ಆ ದಿನಗಳ ಕೊತ್ವಾಲ್ ಶಿಷ್ಯಂದಿರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರಿನಲ್ಲಿ ಸಕ್ರೀಯರಾಗಿದ್ದಾರೆ. ಕೊಲ್ಕತಾ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ರಾಜ್ಯದಲ್ಲಿ ವೈದ್ಯರು ಬೃಹತ್ ಹೋರಾಟ ಕೈಗೊಂಡ ಸಮಯದಲ್ಲಿ ಈ ಪರಿ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯ ಅತ್ಯಾಚಾರವಾಗಿದೆ ಎಂದರೆ,ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಅರಾಜಕತೆ ಸೃಷ್ಟಿಸಿರುವುದೇ ಕಾರಣ.ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮರ್ಥ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಲು ಯೋಗ್ಯತೆ ಇಲ್ಲ.ಪ್ರಜಾಪ್ರಭುತ್ವ, ಸಂವಿಧಾನ, ಕಾನೂನಿಗೆ ಬೆಲೆ ಕೊಡದ ಕಾಂಗ್ರೆಸ್ಸಿನಿಂದ ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಸಿಗಲು ಸಾಧ್ಯವೇ ಇಲ್ಲ” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದೆ.

Advertisement

Udayavani is now on Telegram. Click here to join our channel and stay updated with the latest news.

Next