Advertisement

Bengaluru ಶಂಕಿತ ಉಗ್ರರ ಬಂಧನ ಪ್ರಕರಣ: ದಾವಣಗೆರೆಯಲ್ಲಿ ಓರ್ವನ ಬಂಧನ

03:10 PM Jul 20, 2023 | Team Udayavani |

ದಾವಣಗೆರೆ: ಬೆಂಗಳೂರಿನಲ್ಲಿ ಬುಧವಾರ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಸೆರೆ ಹಿಡಿದ ಪ್ರಕರಣದ ಮುಂದುವರೆದ ಭಾಗವಾಗಿ ದಾವಣಗೆರೆಯಲ್ಲಿ ಗುರುವಾರ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

Advertisement

ದಾವಣಗೆರೆಯ ಆಜಾದ್ ನಗರದ 30 ವರ್ಷದ ಫಯಾಜ್ ಉಲ್ಲಾ ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಉಲ್ಲಾ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಮಾರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಪ್ರಕರಣಗಳಿವೆ.

ಇದನ್ನೂ ಓದಿ:ಚಿಕ್ಕಮಗಳೂರು; ಮಲೆನಾಡಿನ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ಜಾರ್ಖಂಡ್ ರಾಜ್ಯಪಾಲರ ಕುಟುಂಬ

ಬುಧವಾರ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರು ಶಂಕಿತ ಉಗ್ರರ ಬಂಧಿಸಿದ್ದರು. ಶಂಕಿತರ ನೆಲೆ ಈಗ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಗೂ ವಿಸ್ತರಿಸಿದೆ.

ಆಜಾದ್ ನಗರದ ನಿವಾಸಿ ಫಯಾಜ್ ಉಲ್ಲಾ ಎಂಬಾತನನ್ನು ಗುರುವಾರ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ.‌ ಅರುಣ್ ಖಚಿತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next