Advertisement

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

12:56 PM Sep 28, 2024 | Team Udayavani |

ಬೆಂಗಳೂರು: ಮೋಜಿನ ಜೀವನಕ್ಕಾಗಿ ಮಹಿಳೆಯರ ಸರ ಕಳವು ಮಾಡುತ್ತಿದ್ದ ಬಿ.ಕಾಂ ಪದವೀಧರನನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಇಮ್ಮಡಿಹಳ್ಳಿ ನಿವಾಸಿ ವಿನಯ್‌ ಕುಮಾರ್‌(22) ಬಂಧಿತ. ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 77 ಗ್ರಾಂ ತೂಕದ ಎರಡು ಚಿನ್ನದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವೈಟ್‌ಫೀಲ್ಡ್‌ ಸಮೀಪದ ವಿನಾಯಕನಗರದ ಚಿಲ್ಲರೆ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಆರೋಪಿ, ಸಕ್ಕರೆ ತೂಕ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಪ್ರಕರಣ ದಾಖಲಾದ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ವೈಟ್‌ಫೀಲ್ಡ್‌ನ ಹಗದೂರು ಮುಖ್ಯರಸ್ತೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರಗಳವು ಮಾಡಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿ¨ªಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆಡಿಟ್‌ ಅಫೀಸ್‌ನಲ್ಲಿ ಕೆಲಸ ತಿರುಪತಿ ಮೂಲದ ಆರೋಪಿ ವಿನಯ್‌ ಕುಮಾರ್‌ ಬಿ.ಕಾಂ. ಪದವಿಧರ. 1ವರ್ಷದಿಂದ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯ ಬಾಡಿಗೆ ಮನೆ ಯಲ್ಲಿ ನೆಲೆಸಿದ್ದು, ಖಾಸಗಿ ಆಡಿಟ್‌ ಆಪೀಸ್‌ನಲ್ಲಿ ಕೆಲಸ ಮಾಡುತ್ತಿದ್ದ. ಶೋಕಿಲಾಲನಾದ ಈತನಿಗೆ ಸಂಬಳ ಸಾಲುತ್ತಿರಲಿಲ್ಲ. ಹೀಗಾಗಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳವು ಮಾಡುತ್ತಿದ್ದ ಎಂಬುದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next