Advertisement

ಬೆಂಗಳೂರು: ದೂರು ನೀಡಲು ಬಂದ ಯುವತಿಗೆ ಲೈಂಗಿಕ ಕ್ರಿಯೆಗೆ ಇನ್‌ಸ್ಪೆಕ್ಟರ್‌ ಒತ್ತಾಯ !

10:59 AM Mar 22, 2023 | Team Udayavani |

ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಎನ್‌.ರಾಜಣ್ಣ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ನಡೆಸಿದ ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ.ಲಕ್ಷ್ಮೀ ಪ್ರಸಾದ್‌ ನಗರ ಪೊಲೀಸ್‌ ಕಮಿಷನರ್‌ ಪ್ರತಾಪ್‌ ರೆಡ್ಡಿಗೆ ವರದಿ ಸಲ್ಲಿಸಿದ್ದಾರೆ.

Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಯುವತಿಯಿಂದ 15 ಲಕ್ಷ ರೂ. ಸಾಲ ಪಡೆದಿದ್ದ. ಹೀಗಾಗಿ ಸಂತ್ರಸ್ತೆ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಿದ್ದರು. ಆಗ ಯುವತಿಯ ಮೊಬೈಲ್‌ ನಂಬರ್‌ ಪಡೆದು ಕೊಂಡಿದ್ದ ಪಿಐ ರಾಜಣ್ಣ, ಸಂದೇಶ ಕಳುಹಿಸಲಾರಂಭಿಸಿದ್ದ. ಭೇಟಿಯಾಗೋಣ ಬಾ ಎಂದೆಲ್ಲ ಸಂದೇಶ ಕಳುಹಿಸುತ್ತಿದ್ದ. ಮಾರ್ಚ್‌ 24ರಂದು ಠಾಣೆಗೆ ಹೋಗಿದ್ದ ಸಂತ್ರಸ್ತೆಗೆ, ಠಾಣಾಧಿಕಾರಿ ಡ್ರೈ ಫ್ರೂಟ್ಸ್ ಬಾಕ್ಸ್‌ ನೀಡಿ, ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಕೋಣೆಯ ಕೀ ಕೊಟ್ಟು ಒಳಗೆ ನಡೆಯುವಂತೆ ಪರೋಕ್ಷವಾಗಿ ಲೈಂಗಿಕ ಕ್ರಿಯೆಗೆ ಸಹಕಾರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಪಿಐನಿಂದ ತಪ್ಪಿಸಿಕೊಂಡಿದ್ದ ಯುವತಿ, ಕೊಠಡಿಯಿಂದ ಹೊರಬಂದು ಠಾಣೆಯಲ್ಲಿದ್ದ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ಗೆ ವಿಷಯ ತಿಳಿಸಿದ್ದರು.

ಆದರೆ, ಪಿಐ ರಾಜಣ್ಣ ಈ ವಿಚಾರ ಯಾರಿಗೂ ಹೇಳದಂತೆ ತಾಕೀತು ಮಾಡಿದ್ದು, ಅದರಿಂದ ತಮ್ಮ ಮರ್ಯಾದೆ ಹಾಳಾಗುತ್ತದೆ ಎಂದು ಹೇಳಿದ್ದರು. ಆದರೆ, ಘಟನೆಯಿಂದ ವಿಚಲಿತ ಗೊಂಡಿದ್ದ ಸಂತ್ರಸ್ತೆ ಪಿಐ ರಾಜಣ್ಣ ವಿರುದ್ಧ ಡಿಸಿಪಿಗೆ ದೂರು ನೀಡಿದ್ದರು. ಡಿಸಿಪಿ ಯಲಹಂಕ ಉಪವಿಭಾಗ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದು. ಇದೀಗ ಎಸಿಪಿ ವರದಿ ನೀಡಿದ್ದು, ಮೇಲ್ನೋಟಕ್ಕೆ ಪಿಐ ರಾಜಣ್ಣ ಯುವತಿಗೆ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ಕ್ರಿಯೆಗೆ ಪರೋಕ್ಷವಾಗಿ ಒತ್ತಾಯ ಮಾಡಿರುವುದು ಕಂಡು ಬಂದಿದ್ದು, ವರದಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next