Advertisement

Bengaluru: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಪತಿ ಬಂಧನ

11:08 AM Sep 13, 2024 | Team Udayavani |

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಆರೋಪದಡಿ ಪತಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಮಳವಳ್ಳಿಯ ಭಾರತಿ (22) ಆತ್ಮಹತ್ಯೆ ಮಾಡಿಕೊಂಡವರು. ಮಳವಳ್ಳಿಯ ಲೋಕೇಶ್‌ ಬಂಧಿತ.

ಮಳವಳ್ಳಿಯ ಲೋಕೇಶ್‌ ಜೊತೆಗೆ ಕಳೆದ ವರ್ಷ ಭಾರತೀ ಅವರ ವಿವಾಹವಾಗಿತ್ತು. ಮದುವೆ ಸಂದರ್ಭದಲ್ಲಿ 200 ಗ್ರಾಂ ಚಿನ್ನಾಭರಣ, 1 ಲಕ್ಷ ರೂ. ನೀಡಲಾಗಿತ್ತು. ದಂಪತಿ ಆರಂಭದಲ್ಲಿ ಚೆನ್ನಾಗಿದ್ದರು. ಇತ್ತೀಚೆಗೆ ಪ್ರತ್ಯೇಕ ಮನೆ ಮಾಡಲು ಮಹಿಳೆ ಪಾಲಕರು ಮುಂಗಡ ಹಣ ನೀಡಿದ್ದರು. ನಂತರ ದಂಪತಿ ಬೆಂಗಳೂರಿನ ಮಾರುತಿ ನಗರದಲ್ಲಿ ವಾಸವಿದ್ದರು. ಇದಾದ ಬಳಿಕ ಪತಿ ಭಾರತಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಪತಿ ಲೋಕೇಶ್‌ ದೈಹಿಕ ಹಾಗೂ ಮಾನಸಿಕ ಹಿಂಸೆಯಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಭಾರತಿ ತಂದೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿ ಲೋಕೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next