Advertisement

ಪರಪ್ಪನ ಜೈಲಿನ ಕರ್ಮಕಾಂಡ; 2004ರಿಂದ ಸಿಎಜಿ ವರದಿಯಲ್ಲಿ ಉಲ್ಲೇಖ!

04:06 PM Jul 21, 2017 | Team Udayavani |

ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ 2004ರಿಂದ ಸಿಎಜಿ(ಲೆಕ್ಕ ಪರಿಶೋಧಕ ಸಂಸ್ಥೆ) ವರದಿಯಲ್ಲಿ ಉಲ್ಲೇಖಿಸಲಾಗುತ್ತಿದೆ. ಆದರೆ ಕಾರಾಗೃಹ ಅಧಿಕಾರಿಗಳು ವರದಿಯಲ್ಲಿ ನೀಡಿರುವ ಯಾವುದೇ ಸೂಚನೆಗಳನ್ನು ಪಾಲಿಸಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಆರ್.ಅಶೋಕ್ ತಿಳಿಸಿದ್ದಾರೆ.

Advertisement

ಶುಕ್ರವಾರ ವಿಧಾನಸೌಧದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಆರ್.ಅಶೋಕ್ ನೇತೃತ್ವದಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡರು. ಜೈಲು ಅಧಿಕಾರಿಗಳಿಂದ ಲೆಕ್ಕಪತ್ರ ಸಮಿತಿ ಸದಸ್ಯರು ಮಾಹಿತಿ ಪಡೆದರು.

2015ರಲ್ಲಿ ಸಿಎಜಿ ನೀಡಿರುವ ವರದಿ ಯಾಕೆ ಜಾರಿ ಆಗಿಲ್ಲ, ಜೈಲಿನ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು ಇಷ್ಟೊಂದು ಕಾಲಾವಕಾಶ ಯಾಕೆ ಬೇಕು ಎಂದು ಸಮಿತಿ ಅಧ್ಯಕ್ಷ ಅಶೋಕ್ ಅವರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಪ್ರಶ್ನಿಸಿದ್ದು, ಈ ಬಗ್ಗೆ 15 ದಿನದೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಸಿಎಜಿ ವರದಿಯಲ್ಲಿನ ಸೂಚನೆ ಪಾಲನೆ ಮಾಡಿದ್ದರೆ ಕೇಂದ್ರ ಕಾರಾಗೃಹದಲ್ಲಿ ಈ ಅಕ್ರಮ ನಡೆಯುತ್ತಿರಲಿಲ್ಲ. 2009ರಲ್ಲಿಯೇ ಕಾರಾಗೃಹದಲ್ಲಿನ ಲೋಪದೋಷ ಸರಿಪಡಿಸುವಂತೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next