Advertisement

Benjana Padavu: ನೇಣು ಬಿಗಿದು ಆತ್ಮಹತ್ಯೆ

09:21 PM May 07, 2024 | Team Udayavani |

ಬಂಟ್ವಾಳ: ಬೆಂಜನಪದವಿನ ನೈಕುಳಿಗುರಿಯ ಗುಡ್ಡದಲ್ಲಿ ಅಮ್ಮುಂಜೆ ಗ್ರಾಮದ ಕೊಳಂಬೆಕೋಡಿ ನಿವಾಸಿ ವಸಂತ (43) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Advertisement

ಅವರು ಬೆಂಜನಪದವಿನ ಸಹಕಾರಿ ಬ್ಯಾಂಕೊಂದರಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದು, ಸಂಜೆಯ ಬಳಿಕ ಫಾಸ್ಟ್‌ಪುಡ್‌ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇ 6ರಂದು ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮೊಬೈಲ್‌ಗೆ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಂಗಳವಾರ ಹುಡುಕಾಡಿದಾಗ ಅವರ ಮೃತದೇಹ ನೈಕುಳಿಗುರಿಯ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಸಾಲದ ಬಾಧೆ ಅಥವಾ ಇತರ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪತ್ನಿ ನಮಿತಾ ಪೂಜಾರಿ  ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next