Advertisement

Bescom CGM: 7.5 ಲಕ್ಷ ರೂ. ಲಂಚ ಸ್ವೀಕರಿಸಿದ ಬೆಸ್ಕಾಂ ಸಿಜಿಎಂ ಲೋಕಾ ಬಲೆಗೆ

02:00 PM Nov 24, 2023 | Team Udayavani |

ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Advertisement

ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್‌ ನಾಗರಾಜ್‌ ಮತ್ತು ಅವರ ಚಾಲಕ ಮುರಳಿಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಕಮರ್ಷಿಯಲ್ ಎಲೆಕ್ಟ್ರಿಕಲ್‌ ಸಪ್ಲೆ„ನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್‌ ಸಪ್ಲೈಗೆ ಬದಲಾವಣೆ ಮಾಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್‌ 7.5 ಲಕ್ಷ ರೂ.ಗೆ ಬೇಡಿಕೆ ಇಟ್ಟು ಕೆಲಸ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಗುತ್ತಿಗೆದಾರ ಪ್ರತಾಪ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ‌

ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಆರೋಪಿ ಅಧಿಕಾರಿ ನಾಗರಾಜ್‌ ಕಾರ್‌ ಪಾರ್ಕಿಂಗ್‌ನಲ್ಲಿ ಪ್ರತಾಪ್‌ ಎಂಬುವರಿಂದ 7.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಸಾಕ್ಷಿ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next