Advertisement

ಸಹಸ್ರಾರು ಭಕ್ತರ ನಡುವೆ ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

09:53 AM Oct 17, 2017 | |

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ತೀರ್ಥೋದ್ಭವ ಸಂಭವಿಸಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ.

Advertisement

ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್‌ ಸೌಲಭ್ಯ, ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳುವಂತಾಗಲು ಏಕಮುಖವಾಗಿ ಭಕ್ತಾದಿಗಳು ಹೋಗಲು ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪಿಂಡ ಪ್ರಧಾನ ಕಾರ್ಯಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾವೇರಿ ಮಾತೆ ಕುರಿತು ಭಕ್ತಿ ಗೀತಾಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾಗಮಂಡಲ ಸುತ್ತಮುತ್ತ 10 ಕಿ.ಮೀ.ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next