Advertisement

Bhadra Reservoir; ಆ.10 ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು

08:47 PM Aug 09, 2023 | Team Udayavani |

ಶಿವಮೊಗ್ಗ: ಭದ್ರಾ ಜಲಾಶಯ ಪೂರ್ಣ ಭರ್ತಿಯಾಗದಿದ್ದರೂ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ನೀರಾವರಿ ನಿಗಮ ತೀರ್ಮಾನಿದೆ. ಜತೆಗೆ ನೀರು ಕಡಿಮೆಯಾಗಿ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ ಎಂದು ಸಹ ಹೇಳಿದೆ.

Advertisement

ಆ.10ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದಾಗಿ ಪ್ರಕಟಣೆ ಹೊರಡಿಸಿದೆ. ಜಲಾಶಯದಲ್ಲಿ ಪ್ರಸ್ತುತ 166 ಅಡಿ (ಗರಿಷ್ಠ 186 ಅಡಿ) ನೀರಿದ್ದು ನೀರು ಬಿಡುತ್ತಾರೆಯೇ ಇಲ್ಲವೇ ಎಂಬುದರ ಬಗ್ಗೆ ಗೊಂದಲ ಮೂಡಿತ್ತು. ಅಂತಿಮವಾಗಿ ಇಲಾಖೆ ನೀರು ಬಿಡುವ ದಿನಾಂಕ ಘೋಷಿಸಿದೆ.
ಆ.10ರಿಂದ ನೂರು ದಿನಗಳ ಕಾಲ ಎಡದಂಡೆ ಕಾಲುವೆಗೆ 380 ಕ್ಯೂಸೆಕ್ಸ್, ಬಲದಂಡೆ ಕಾಲುವೆಗೆ 2650 ಕ್ಯೂಸೆಕ್ಸ್ ಹರಿಸಲಾಗುವುದು. ನೀರಿನ ಲಭ್ಯತೆ, ಒಳಹರಿವಿನ ಆಧಾರದ ಮೇಲೆ ನೀರು ಹರಿಸಲಾಗುತ್ತಿದೆ. ನೀರಿನ ಕೊರತೆಯಿಂದ ಬೆಳೆ ನಷ್ಟವಾದಲ್ಲಿ ಅದಕ್ಕೆ ಇಲಾಖೆ ಹೊಣೆಯಲ್ಲ. ಭದ್ರಾ ಜಲಾಶಯ ವ್ಯಾಪ್ತಿಯ 1.07 ಲಕ್ಷ ಹೆಕ್ಟೇರ್ನಲ್ಲಿ ಪ್ರಕಟಿತ ಮುಂಗಾರು ಬೆಳೆ ಬೆಳೆಯಲು ಅವಕಾಶವಿದ್ದು ನಿಗದಿತ ವಿಸ್ತೀರ್ಣದಲ್ಲಿ ಬೆಳೆ ಬೆಳೆದು ರೈತರು ಸಹಕರಿಸಬೇಕು.

ಬೇರೆ ಬೆಳೆ ಬೆಳೆದು ನಷ್ಟ ಅನುಭವಿಸಿದರೆ ಅದಕ್ಕೆ ರೈತರೆ ನೇರ ಹೊಣೆ ಎಂದು ಆದೇಶಿಸಲಾಗಿದೆ. 72 ಟಿಎಂಸಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 49 ಟಿಎಂಸಿ ಮಾತ್ರ ನೀರಿದೆ. ಮಳೆ ಕೈಕೊಟ್ಟರೆ ರೈತರು ನಷ್ಟ ಅನುಭವಿಸುವುದು ಖಚಿತ.

Advertisement

Udayavani is now on Telegram. Click here to join our channel and stay updated with the latest news.

Next