Advertisement

ಮಹಾರಾಷ್ಟ್ರ ರಾಜ್ಯಪಾಲ ಹುದ್ದೆ ತೊರೆದ ಭಗತ್ ಸಿಂಗ್ ಕೋಶ್ಯಾರಿ; ನೂತನ ಗವರ್ನರ್ ನೇಮಕ

10:30 AM Feb 12, 2023 | Team Udayavani |

ಮುಂಬೈ: ಕಳೆದ ಕೆಲವು ದಿನಗಳಿಂದ ಸುದ್ದಿಯಾಗುತ್ತಿದ್ದ ಹಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಶ್ಯಾರಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Advertisement

ಜಾರ್ಖಂಡ್ ರಾಜ್ಯಪಾಲರಾಗಿರುವ ರಮೇಶ್ ಬಯಸ್ ಅವರನ್ನು ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್‌ಗಳ ಕುರಿತು ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರು ತಮ್ಮ ಹುದ್ದೆಯಿಂದ ನಿರ್ಗಮಿಸಿದ್ದಾರೆ.

ಇದನ್ನೂ ಓದಿ:ನಮ್ಮ ರಸ್ತೆ ಎಷ್ಟು ಕೆಟ್ಟದಾಗಿದೆಯೆಂದರೆ…: ಗಡ್ಕರಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

ಮಹಾರಾಷ್ಟ್ರ ರಾಜಕೀಯ ವಿಪ್ಲವದ ನಡುವೆ ರಾಜ್ಯಪಾಲರಾಗಿದ್ದ 81 ವರ್ಷದ ಕೋಶ್ಯಾರಿ ಅವರು ಹಲವು ಸವಾಲುಗಳನ್ನೂ ಎದುರಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಹುದ್ದೆಗೆ ರಾಜೀನಾಮೆ ನೀಡಿ ಓದಲು ಮತ್ತು ಬರವಣಿಗೆಗೆ ಸಮಯವನ್ನು ವಿನಿಯೋಗಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next