Advertisement

Bhageeratha; ತೆರೆಯತ್ತ ಭಗೀರಥ ಪ್ರಯತ್ನ

05:34 PM Sep 05, 2024 | Team Udayavani |

“ಭಗೀರಥ’ ಎಂಬ ಸಿನಿಮಾವೊಂದು ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರಕ್ಕಾಗಿ ಪ್ರಮೋಶನ್‌ ಸಾಂಗ್‌ವೊಂದನ್ನು ಚಿತ್ರೀಕರಿಸಿದೆ. ನಾಯಕ ಜಯಪ್ರಕಾಶ್‌, ನಾಯಕಿಯರಾದ ನಿಸರ್ಗ ಅಣ್ಣಪ್ಪ ಹಾಗೂ ರೂಪಶ್ರೀ ಈ ಹಾಡಿನ ಚಿತ್ರೀಕರಣದಲ್ಲಿ ಅಭಿನಯಿಸಿದ್ದಾರೆ. ನಾಗಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಮ್‌ ಜನಾರ್ದನ್‌ ನಿರ್ದೇಶನ ಮಾಡಿದ್ದಾರೆ.

Advertisement

ಚಿತ್ರದ ಬಗ್ಗೆ ಮಾತನಾಡುವ ಅವರು, “ಹದಿನೈದು ವರ್ಷಗಳ ಹಿಂದೆ ಬಾಯ್‌ ಫ್ರೆಂಡ್‌ ಚಿತ್ರದ ಮೂಲಕ ನಿರ್ದೇಶಕ ನಾದೆ. ಈಗ ವಿಭಿನ್ನ ಕಥೆಯುಳ್ಳ ಈ ಚಿತ್ರವನ್ನು ನಿರ್ದೇಶಿಸಿದ್ದೇನೆ. ಭಗೀರಥ ಹೆಸರೆ ಹೇಳುವಂತೆ ಅಸಾಧ್ಯವಾದುದ್ದನ್ನು ಸಾಧಿಸುವವನು ಎಂದು. ನಮ್ಮ ಚಿತ್ರದ ಕಥೆಯೂ ಇದೇ ಅರ್ಥದಲ್ಲಿ ಸಾಗುತ್ತದೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಮುಂದಿನವಾರ ಚಿತ್ರ ಸೆನ್ಸಾರ್‌ ಮುಂದೆ ಬರಲಿದೆ’ ಎಂದರು.

ಸಾಯಿ ರಮೇಶ್‌ ಪ್ರೊಡಕ್ಷನ್‌ ಲಾಂಛನದಲ್ಲಿ ನಾನು ಹಾಗೂ ಕೆ.ರಮೇಶ್‌ ಅವರು ಈ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ತಿಳಿಸಿದ ನಿರ್ಮಾಪಕ ಬಿ.ಭೈರಪ್ಪ, ಸಣ್ಣ ಪಾತ್ರ ಕೂಡ ಮಾಡಿರುವುದಾಗಿ ಹೇಳಿದರು. “ಭಗೀರಥ ಚಿತ್ರದಲ್ಲಿ ಯಾವುದಕ್ಕೂ ಹೆದರದ, ವಿಲ್‌ ಪವರ್‌ ಇರುವ ಮನುಷ್ಯನ ಪಾತ್ರ ನನ್ನದು. ಈ ಚಿತ್ರದಲ್ಲಿ ಸಾಹಸ ಸನ್ನಿವೇಶಗಳು ಹೈಲೈಟ್‌. ನಾನು ಕರಾಟೆ ಪಟು ಆಗಿರುವುದರಿಂದ ಸಾಹಸ ಸನ್ನಿವೇಶದಲ್ಲಿ ನಟಿಸುವುದು ಸುಲಭವಾಯಿತು’ ಎಂದರು ನಾಯಕ ನಟ ಜಯಪ್ರಕಾಶ್‌.

ಚಿತ್ರದಲ್ಲಿ ನಟಿಸಿದ ನಿಸರ್ಗ ಅಣ್ಣಪ್ಪ, ರೂಪಶ್ರೀ. ಖಳನಟ ಶಶಿಧರ್‌, ನೃತ್ಯ ನಿರ್ದೇಶಕ ನಾಗಿ, ಛಾಯಾಗ್ರಾಹಕ ಮಹೇಶ್‌ ತಲಕಾಡು ಮುಂತಾದವರು ಭಗೀರಥ ಚಿತ್ರದ ಕುರಿತು ಮಾತನಾಡಿದರು. ಪ್ರದೀಪ್‌ ವರ್ಮ ಸಂಗೀತ ನಿರ್ದೇಶನ ಹಾಗೂ ಸೂರಿ ಚಿತ್ತೂರು ಛಾಯಾಗ್ರಹಣವಿದೆ.

Advertisement

Udayavani is now on Telegram. Click here to join our channel and stay updated with the latest news.

Next