Advertisement

ಗೋಲ್ಡನ್ ಟೆಂಪಲ್, ಜಲಿಯನ್ ವಾಲಾ ಬಾಗ್ ಗೆ ಕೇಜ್ರಿವಾಲ್, ಮಾನ್ ಭೇಟಿ

02:11 PM Mar 13, 2022 | Team Udayavani |

ಅಮೃತ ಸರ : ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷ ಭಾನುವಾರ ಅಮೃತ ಸರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ನಡೆಸುತ್ತಿದೆ.

Advertisement

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಭಗವಂತ್ ಮಾನ್ ,ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರೋಡ್‌ಶೋಗೆ ಮುಂಚಿತವಾಗಿ ಸ್ವರ್ಣ ಮಂದಿರ, ಜಲಿಯನ್ ವಾಲಾ ಬಾಗ್ ಸ್ಮಾರಕಕ್ಕೆ ಭೇಟಿ ನೀಡಿ ಪ್ರಾರ್ಥನೆ ಮತ್ತು ಗೌರವ ಸಲ್ಲಿಸಿದರು. ನಂತರ ದುರ್ಗಿಯಾನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಅಮೃತಸರ ರೋಡ್‌ಶೋಗೆ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಆಗಮಿಸಿದ್ದಾರೆ.

ರೋಡ್‌ಶೋ ಭಾಗವಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಮತ್ತು ಭಗವಂತ್ ಮಾನ್, ಆಪ್ ಶಾಸಕರ ಪೋಸ್ಟರ್‌ಗಳು ಮತ್ತು ಕಟೌಟ್‌ಗಳು ರಾಜ್ಯದ ರಸ್ತೆಗಳಲ್ಲಿ ರಾರಾಜಿಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next