Advertisement

ಕೃಷಿ ವಿಜ್ಞಾನದಲ್ಲಿ ಸಾಧನೆಗೈದ ಭಾಗ್ಯಶ್ರೀ

09:22 PM Apr 12, 2019 | mahesh |

ಸುಳ್ಯಪದವು: ಸಾಧನೆಗೆ ಅಸಾಧ್ಯವಾಗುವುದು ಯಾವುದೂ ಇಲ್ಲ. ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಒಂದು ಉದಾಹರಣೆ ಕನ್ನಡ ಮಾಧ್ಯಮದಲ್ಲಿ ಕಲಿತು ಚಿನ್ನದ ಪದಕ ಗಳಿಸಿದ ಗ್ರಾಮೀಣ ಪ್ರದೇಶದ ಪ್ರತಿಭೆ ಭಾಗ್ಯಶ್ರೀ ಕೆ.ಎಚ್‌.

Advertisement

ಕನ್ನಡ ಮಾಧ್ಯಮದಲ್ಲಿ ಎಸೆಸೆಲ್ಸಿ ಶಿಕ್ಷಣ ಪಡೆದ ಈ ವಿದ್ಯಾರ್ಥಿನಿಯ ಸಾಧನೆ ಶಿಕ್ಷಣಕ್ಕೆ ಮಾಧ್ಯಮ ಮುಖ್ಯವಲ್ಲ ಎಂದು ಸಾಧಿಸಿ ತೋರಿಸಿದ್ದಾಳೆ ಈ ಚಿನ್ನದ ಹುಡುಗಿ. ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸುಳ್ಯಪದವು ಶಬರಿನಗರದ ಕೇಶವ ಗೌಡ ಮತ್ತು ರತ್ನಾ ಕೆ. ಅವರ ಪುತ್ರಿ. ಬಾಲ್ಯದಿಂದಲೇ ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಪ್ರಾಥಮಿಕ ಶಿಕ್ಷಣವನ್ನು ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿ.ಪ್ರಾ. ಶಾಲೆಯಲ್ಲಿ ಪೂರೈಸಿದ್ದರು.

ಟ್ಯೂಷನ್‌ ಪಡೆದಿಲ್ಲ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಯನ್ನು ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾದರು. ಸರ್ವೋದಯ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದು ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 96.43 ಅಂಕ ಪಡೆದು ತಾಲೂಕಿಗೆ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ಪಿಯುಸಿ ಶಿಕ್ಷಣವನ್ನು ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ವಿಜ್ಞಾನ ವಿಷಯದಲ್ಲಿ ಶಿಕ್ಷಣ ಪಡೆದು ಶೇ. 96.33 ಅಂಕ ಪಡೆದುಕೊಂಡರು. ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ದಿನಾಲೂ ಬಂದು ಹೋಗಿ ಯಾವುದೇ ಟ್ಯೂಶನ್‌ ಪಡೆಯದೇ ಅತೀ ಹೆಚ್ಚು ಅಂಕ ಪಡೆದಿರುವುದು ಆವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ.

ಬ್ಯಾಂಕ್‌ನಲ್ಲಿ ಉದ್ಯೋಗ
ಸಿಇಟಿ ಪರೀಕ್ಷೆಯಲ್ಲಿ ಹಾಸನದ ಕೃಷಿ ವಿದ್ಯಾಲಯಲ್ಲಿ ಸೀಟು ಪಡೆದು 4 ವರ್ಷದ ಸೆಮಿಸ್ಟರ್‌ನಲ್ಲಿ ಉತ್ತಮ ಅಂಕ ಪಡೆದುಕೊಂಡರು. ಮಾ. 25ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಐದು ಚಿನ್ನದ ಪದಕವನ್ನು ಪಡೆದುಕೊಂಡು ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡರು. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಂತೆ ಬ್ಯಾಂಕ್‌ ಆಫ್ ಬರೋಡಾದಲ್ಲಿ ಉದ್ಯೋಗ ಪಡೆದುಕೊಂಡರು. ಅತೀ ಚಿಕ್ಕ ಪ್ರಾಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಒಬ್ಬರು ಇಂತಂಹ ಸಾಧನೆ ಮಾಡಿದ್ದು ವಿಶಿಷ್ಟವೆನಿಸಿದೆ.

ಒತ್ತಡವಿಲ್ಲದ ಶಿಕ್ಷಣ
ಭಾಗ್ಯಶ್ರೀ ಪ್ರತಿಭೆಯನ್ನು ಎಳವೆಯಲ್ಲೇ ಗುರುತಿಸಿದ್ದೆವು. ಎಲ್ಲರಂತೆ ಶಿಕ್ಷಣವನ್ನು ಪಡೆದಿದ್ದಳು. ಯಾವುದೇ ಒತ್ತಡ ಹಾಕಲಿಲ್ಲ. ಪ್ರೋತ್ಸಾಹ, ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಸಿಕ್ಕಿ, ಸಾಧನೆ ಮಾಡಿದ್ದು ಸಂತೋಷವಾಗಿದೆ.
ಕೇಶವ ಗೌಡ, ರತ್ನಾ ಕೆ. ಭಾಗ್ಯಶ್ರೀ ತಂದೆ, ತಾಯಿ

Advertisement

ರೈತರ ಸೇವೆಗೆ ಸಿದ್ಧ
ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವಾಗ ಮನೆ ಕಷ್ಟವನ್ನು ನೆನೆಸಿ ಏನಾದರೂ ಸಾಧನೆ ಮಾಡುವ ಛಲ ಇಟ್ಟುಕೊಂಡು ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡಿರುವುದರಿಂದ ಒಂದು ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಮುಂದುವರಿಸಿದೆ. ಮನೆಯಲ್ಲಿ ಒಳ್ಳೆಯ ಬೆಂಬಲ, ಶಿಕ್ಷಕ ಮತ್ತು ಉಪನ್ಯಾಸಕರ ಪ್ರೋತ್ಸಾಹದಿಂದ ಗುರಿಯನ್ನು ತಲುಪಿದ್ದೇನೆ. ಕೃಷಿಯಲ್ಲಿ ಹೆಚ್ಚು ಅಸಕ್ತಿ ವಹಿಸಿ ರೈತರ ಸೇವೆಯನ್ನು ಮಾಡಲು ಸಿದ್ಧನಾಗಿದ್ದೇನೆ.
ಭಾಗ್ಯಶ್ರೀ ಕೆ.ಎಚ್‌. ಚಿನ್ನದ ಪದಕ ವಿಜೇತೆ

ಮಾಧವ ನಾಯಕ್‌ ಕೆ.

Advertisement

Udayavani is now on Telegram. Click here to join our channel and stay updated with the latest news.

Next