Advertisement

ಭೈರಗೊಂಡ ಹತ್ಯಾ ಯತ್ನ ಪ್ರಕರಣ : ಪೊಲೀಸರಿಂದ ಮತ್ತಿಬ್ಬರ ಬಂಧನ

01:54 PM Nov 26, 2020 | sudhir |

ವಿಜಯಪುರ: ಈ ತಿಂಗಳ 2 ರಂದು‌ ಭೀಮಾ ತೀರದ ಮಹಾದೇವ ಭೈರಗೊಂಡ ಹತ್ಯಾಯತ್ನ ಹಾಗೂ ಭೈರಗೊಂಡ ಅನುಯಾಯಿ ಇಬ್ಬರ ಹತ್ಯೆ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಬಂಧಿತರನ್ನು ಜಾಲಗೇರಿ ತಾಂಡಾ ನಿವಾಸಿ 26 ವರ್ಷದ ಸಚಿನ್ ರಮೇಶ ಚವ್ಹಾಣ, ಚಡಚಣ ಪಟ್ಟಣದ 26 ವರ್ಷದ ಮಲ್ಲಿಕಾರ್ಜುನ ಶಿವಾನಂದ ಪಾಟೀಲ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ 1 ಕಂಟ್ರಿ ಪಿಸ್ತೂಲ್, 1 ಜೀವಂತ ಗುಂಡು, 1 ತಲವಾರ 2 ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ನ.2 ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಾಳ ಕ್ರಾಸ್ ಬಳಿ ಭೈರಗೊಂಡ ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡಿಸಿ ಹತ್ಯೆಗೆ ಯತ್ನಿಸಲಾಗಿತ್ತು. ಘಟನೆಯಲ್ಲಿ ಭೈರಗೊಂಡ ಬೆಂಬಲಿಗ ಇಬ್ಬರು ಹತ್ಯೆಯಾಗಿದ್ದರು.

ಇದನ್ನೂ ಓದಿ:ಕಳ್ಳರನ್ನು ಹಿಡಿಯಲು ಹೋದ ಆಂಧ್ರ ಪೋಲೀಸರ ಮೇಲೆ ಇರಾನಿ ಗ್ಯಾಂಗ್ ಹಲ್ಲೆ: ಕಳ್ಳರ ತಂಡ ಪರಾರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next