Advertisement

ಮಂಗಳೂರು: ಅಕ್ರಮ ಜಾನುವಾರು ಸಾಗಾಟದ ಮೇಲೆ ಭಜರಂಗದಳ ದಾಳಿ

09:43 AM Jun 14, 2020 | keerthan |

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಪತ್ತೆ ಹಚ್ಚಿದ ಮಂಗಳೂರು ಭಜರಂಗದಳ ಸಂಘಟನೆಯು ಇಂದು ನಸುಕಿನ ಜಾವ ದಾಳಿ ಕಾರ್ಯಾಚರಣೆ ನಡೆಸಿದ ಬಗ್ಗೆ ವರದಿಯಾಗಿದೆ.

Advertisement

ಕೊಟ್ಟಾರ ಬಳಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮಿನಿ ಟೆಂಪೋವನ್ನು ತಡೆದು ನಾಲ್ಕು ಕೋಣಗಳನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಆರೋಪಿಯನ್ನು ಹಿಡಿದು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.

ಈತ ಉಡುಪಿಯಿಂದ ಮಂಗಳೂರು ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾಗಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ ನಾಲ್ಕು ಕೋಣಗಳ ರಕ್ಷಣೆ ಮಾಡಲಾಗಿದೆ.

ಉರ್ವ ಪೊಲೀಸರು ಸ್ಥಳಕ್ಕೆ ಧಾವಿಸಿ ಕೋಣಗಳು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next