Advertisement

ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ: ಪ್ರಕಾಶ ಖಂಡ್ರೆ

01:23 PM May 07, 2020 | Naveen |

ಭಾಲ್ಕಿ: ಮಾರಕ ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.

Advertisement

ತಾಲೂಕಿನ ಲಖಣಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗೆ ಸಾನಿಟೈಸರ್‌ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಯಾರೂ ಅನಗತ್ಯವಾಗಿ ಓಡಾಡಬಾರದು. ಕೈಗಳನ್ನು ಸಾನಿಟೈಸರ್‌ನಿಂದ ತೊಳೆದುಕೊಳ್ಳಬೇಕು. ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ಕೋವಿಡ್ ನಿಂದ  ಇಡೀ ಜಗತ್ತು ತಲ್ಲಣಗೊಂಡಿದೆ. ಬಡವರು, ಕಾರ್ಮಿಕರು ಕಷ್ಟಕ್ಕೀಡಾಗಿದ್ದಾರೆ. ಪ್ರತಿಯೊಬ್ಬರು ತಾಳ್ಮೆಯಿಂದಿರಬೇಕು. ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಪಂ ಮಾಜಿ ಸದಸ್ಯ ಯಾದವರಾವ ಕನಸೆ, ಪುರಸಭೆ ಮಾಜಿ ಅಧ್ಯಕ್ಷ ಕೈಲಾಸನಾಥ ಮೀನಕೆರೆ, ಗೋವಿಂದರಾವ ಬಿರಾದಾರ, ಗ್ರಾಪಂ ಅಧ್ಯಕ್ಷ ರಾಜಕುಮಾರ ಸೂರ್ಯವಂಶಿ, ಮುಖಂಡರಾದ ಗೋವಿಂದರಾವ ಚಾಂದಿವಾಲೇ, ಗೋವಿಂದರಾವ ಬಿರಾದಾರ ಮಾವಿನಹಳ್ಳಿ, ಜನಾರ್ಧನ ಸೂರ್ಯವಂಶಿ, ಶಿವಾ ಸೋಂಪುರ, ಪಾಂಡುರಂಗ ಸಲಾಬಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next