Advertisement

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

09:58 PM Oct 08, 2024 | Team Udayavani |

ಭರಮಸಾಗರ: ರೈತನೊಬ್ಬ ಸಾಲಭಾದೆಯಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ಪಳಕೆಹಳ್ಳಿ  ಗ್ರಾಮದಲ್ಲಿ ಅ.8ರ ಮಂಗಳವಾರ ಸಂಜೆ ನಡೆದಿದೆ.

Advertisement

ಕೆಂಚ ಹನುಮಂತಪ್ಪ (45) ನೇಣಿಗೆ ಶರಣಾದ ರೈತ.

ಕೃಷಿ ಕೆಲಸಗಳಿಗಾಗಿ ಖಾಸಗಿಯಾಗಿ ಸಾಲ ಮಾಡಿಕೊಂಡು ಕಳೆದ ಕೆಲ ವರ್ಷಗಳಿಂದ ಮನನೊಂದಿದ್ದರು ಎನ್ನಲಾಗಿದೆ.

ಕಳೆದ 3 ವರ್ಷಗಳಿಂದ ಬರ, ಅಧಿಕ ಮಳೆ, ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ನಷ್ಟಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆ ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next