Advertisement

ಬಸವ ಜಯಂತಿಗೆ ಗ್ರಾಪಂ ಪಿಡಿಒ- ಕಾರ್ಯದರ್ಶಿ ಗೈರು: ಕ್ರಮಕ್ಕೆ ಆಗ್ರಹ

05:00 PM Apr 27, 2020 | Naveen |

ಭರಮಸಾಗರ: ಇಲ್ಲಿನ ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮಕ್ಕೆ ಪಿಡಿಒ ಕೆ.ಎಸ್‌. ಶ್ರೀದೇವಿ ಮತ್ತು ಕಾರ್ಯದರ್ಶಿ ಕೆ.ಎಸ್‌. ವೈಶಾಲಿ ಗೈರುಹಾಜರಾಗುವ ಮೂಲಕ ಕರ್ತವ್ಯ ಲೋಪ ಎಸಗಿದ್ದಾರೆ. ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಪಂ ಸಿಇಒ ಹಾಗೂ ತಾಪಂ ಇಒ ಅವರಿಗೆ ಗ್ರಾಪಂ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್‌ ಮತ್ತು ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಪತ್ರ ಬರೆಯಲಾಗಿದೆ.

Advertisement

ಬಸವ ಜಯಂತಿ ಆಚರಣೆ ಕುರಿತು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಮಾಹಿತಿಯನ್ನೂ ನೀಡದ ಪಿಡಿಒ, ಕಾರ್ಯದರ್ಶಿ ಸ್ವತಃ ತಾವೇ ಗೈರುಹಾಜರಾಗಿದ್ದಾರೆ. ಗ್ರಾಪಂನಲ್ಲಿ ನಡೆಯುವ ಎಲ್ಲಾ ಜಯಂತಿ ಮತ್ತು ಸಭೆಗಳಿಗೆ ಪಿಡಿಒ ಸಕಾಲಕ್ಕೆ ಹಾಜರಾಗದೆ ನಿರ್ಲಕ್ಷé ತೋರುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರ ಕೆಲಸ ಕಾರ್ಯಗಳ ನಿರ್ವಹಣೆಯಲ್ಲೂ ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಗ್ರಾಪಂ ಮಾಜಿ ಅಧ್ಯಕ್ಷ ಸಂತೋಷ್‌ ಹಾಗೂ ಸದಸ್ಯ ಎ.ಬಿ.ಟಿ. ನಿರಂಜನಮೂರ್ತಿ ನೇತೃತ್ವದಲ್ಲಿ ಕಚೇರಿಯಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು. ಗ್ರಾಪಂ ಪಿಡಿಒ, ಕಾರ್ಯದರ್ಶಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯಿತ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್‌.ಎನ್‌. ಪ್ರವೀಣ್‌, ಬಸವ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳದ ಗ್ರಾಪಂ ಪಿಡಿಒ, ಡ್ರೈವರ್‌ ಒಬ್ಬರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವದಾಗಿ ತಿಳಿಸಿದ್ದಾರೆ. ಈ ರೀತಿ ಬೇಜವಾಬ್ದಾರಿ ಉತ್ತರ ನೀಡಿರುವ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next