Advertisement

ಭಾರತ್ ಜೋಡೋ ಯಾತ್ರೆ; ಅಪಘಾತಕ್ಕೆ ಸಾಗರದ ವ್ಯಕ್ತಿ ಬಲಿ

10:16 PM Oct 10, 2022 | Team Udayavani |

ಸಾಗರ: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಿರಿಯೂರಿನಲ್ಲಿ ಸೋಮವಾರ ನಡೆದಿದೆ.

Advertisement

ರಸ್ತೆ ಅಪಘಾತದಲ್ಲಿ ತಾಲೂಕಿನ ಹಿರೆಬಿಲಗುಂಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತದಿಂಬದ ನಿವಾಸಿ ರಮೇಶ್(50) ಹೆದ್ದಾರಿ ದಾಟುವಾಗ ಟೆಂಪೋ ಟ್ರಾವೆಲರ್ ಢಿಕ್ಕಿ ಆಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ರಮೇಶ್ ಸಾಗರ ತಾಲೂಕಿನ ಕಾಂಗ್ರೆಸ್ ಬೂತ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತಾಲೂಕಿನ ಕಾಂಗ್ರೆಸ್ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದು ಪ್ರಕ್ರಿಯೆಗಳು ವೇಗವಾಗಿ ನಡೆಯಲು ಸಹಕರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next