Advertisement

ಜಯಲಲಿತಾಗೆ ಭಾರತ ರತ್ನ ಇಲ್ಲ:ಅರ್ಜಿ ತಿರಸ್ಕರಿಸಿದ ಮದ್ರಾಸ್‌ ಹೈಕೋರ್ಟ್

04:03 PM Jan 06, 2017 | udayavani editorial |

ಚೆನ್ನೈ : ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿ| ಜೆ ಜಯಲಲಿತಾ ಅವರಿಗೆ ದೇಶದ ಪರಮೋಚ್ಚ ಪ್ರಶಸ್ತಿಯಾಗಿರುವ ಭಾರತ ರತ್ನವನ್ನು ಕೊಡಿಸಬೇಕೆಂದು ಕೋರಿದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ಇಂದು ಶುಕ್ರವಾರ ತಿರಸ್ಕರಿಸಿದೆ.

Advertisement

ತಮಿಳುನಾಡಿನ ಪ್ರೀತಿಯ ಅಮ್ಮ ಜಯಲಲಿತಾಗೆ ಭಾರತ ರತ್ನ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂಬ ಕೋರಿಕೆಯನ್ನು ಕೂಡ ಮದ್ರಾಸ್‌ ಹೈಕೋರ್ಟ್‌ ತಿರಸ್ಕರಿಸಿದೆ. 

ಈ ಮೊದಲು ತಮಿಳುನಾಡಿನ ಸಚಿವ ಸಂಪುಟವು ಎಐಎಡಿಎಂಕೆ ಪಕ್ಷದ ಮುಖ್ಯಸ್ಥೆ ದಿ| ಜಯಲಲಿತಾ ಅವರಿಗೆ ಭಾರತ ರತ್ನ ಬಿರುದನ್ನು ಪ್ರದಾನಿಸಬೇಕೆಂದು ಶಿಫಾರಸು ಮಾಡಲು ನಿರ್ಧರಿಸಿತ್ತು.

ಜಯಲಲಿತಾ ಅವರಿಗೆ ಭಾರತ ರತ್ನ ಬಿರುದನ್ನು ಕೊಡಬೇಕು ಮತ್ತು ಸಂಸತ್ತಿನ ಸಂಕೀರ್ಣದಲ್ಲಿ ಜಯಲಲಿತಾ ಅವರ ಕಂಚಿನ ಮೂರ್ತಿಯನ್ನು ಸ್ಥಾಪಿಸಬೇಕು ಎಂಬ ತಮಿಳು ನಾಡುವ ಸರಕಾರದ ಕೋರಿಕೆಯನ್ನು ಒಳಗೊಂಡ ಪತ್ರವನ್ನು ಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next