Advertisement

ದಾಂಡೇಲಿಯಲ್ಲಿ ಭಾರತ್ ಬಂದ್  ಬೆಂಬಲಿಸಿ ಪ್ರತಿಭಟನೆ

02:28 PM Sep 27, 2021 | Team Udayavani |

ದಾಂಡೇಲಿ : ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ರೈತ ಸಂಘಟನೆಗಳು ನೀಡಿರುವ ಭಾರತ್ ಬಂದ್ ಬೆಂಬಲಿಸಿ ಸೋಮವಾರ ನಗರದ ಸೋಮಾನಿ ವೃತ್ತದಲ್ಲಿ ನಗರದ ಡಿವೈಎಫ್ಐ, ಸಿಐಟಿಯೂ, ರೈತಸಂಘ, ಜನವಾದಿ ಮಹಿಳಾ ಸಂಘಟನೆಗಳು ಹಾಗೂ ಅಂಗನವಾಡಿ ನೌಕರರ ಸಂಘವು ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್ ಅವರು ರೈತರ ಭೂಮಿ ಕಬಳಿಸಲು ಅನುವುಗೊಳಿಸುವ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿ ಕಾರ್ಪೋರೆಟ್ ಕಂಪೆನಿಗಳಿಗೆ ರೈತರ ಉತ್ಪನ್ನಗಳ ಲೂಟಿಗೆ ಅನುವುಗೊಳಿಸಿದೆ. ಕೃಷಿ ಕಾಯ್ದೆ ತಿದ್ದುಪಡಿಯಿಂದ ದೇಶದ ರೈತರ ಸ್ಥಿತಿ ತೀವ್ರ ಗಂಭೀರವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಹಾಗೂ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಸಿಐಟಿಯು ಮುಖಂಡ ಝಡ್ ದೇವರಾಜು, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವಿಭಾಗಗಳ ಅಧ್ಯಕ್ಷ ವಿನಾಯಕ ಬಾರಕೇರ, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ರತ್ನಾದೀಪ ಎಂ ಮೊದಲಾದವರು ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸಿದರು. ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ವಾಪ್ಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಆಲೂರು ಗ್ರಾಮ ಪಂಚಾಯ್ತು ಅಧ್ಯಕ್ಷ ಲಕ್ಷ್ಮಣ ಜಾಧವ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಫರ್ ಮಸನಕಟ್ಟಿ, ಸಂಘಟನೆಯ ಮುಖಂಡರುಗಳಾದ ಇಮ್ರಾನ್ ಖಾನ್, ಪದ್ಮಾ ಕಾಳೆ, ಮಹಮ್ಮದ ಬಿಚ್ಚಣ್ಣವರ, ಮ್ಯಾಥ್ಯೂ, ರಾಮಾಂಜನೇಯ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next