Advertisement

ಭಾರತ್ ಬಂದ್: ಮಂಗಳೂರಿನಲ್ಲಿ ಎಂದಿನಂತೆ ರಸ್ತೆಗಿಳಿಯಲಿದೆ ಬಸ್ ಗಳು

09:38 AM Jan 08, 2020 | keerthan |

ಮಂಗಳೂರು: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಭಾರತ ಬಂದ್ ಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಗಳಿಂದ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

Advertisement

ಬುಧವಾರ ಕರೆಯಲಾಗಿರುವ ಭಾರತ್ ಬಂದ್ ಗೆ ಮಂಗಳೂರು ಮತ್ತು ಉಡುಪಿಯ ಬಸ್ ಮಾಲಕರ ಬೆಂಬಲವಿಲ್ಲ. ಕರಾವಳಿಯಲ್ಲಿ ಬಸ್ ಗಳು ಎಂದಿನಂತೆ ಸಂಚರಿಸುತ್ತದೆ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷರಾಜವರ್ಮ ಬಲ್ಲಾಳ್ ಮತ್ತು ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ನಾಳೆಯ ಮುಷ್ಕರಕ್ಕೆ ಆರು ಬ್ಯಾಂಕ್ ಯೂನಿಯನ್ ಗಳು ಬೆಂಬಲ ನೀಡಿರುವ ಕಾರಣ ಬಹುತೇಕ ಬ್ಯಾಂಕ್ ಗಳು ಬಂದ್ ಆಗಿರಲಿವೆ. ಆದರೆ ಆನ್ ಲೈನ್ ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ಅಡಚಣೆ ಇರುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next