Advertisement

ಶ್ರೀ ಆದಿಶಕ್ತಿ ಕನ್ನಡ ಸಂಘ ಅಧ್ಯಕ್ಷರಾಗಿ ಭಾಸ್ಕರ ಎಂ.ಶೆಟ್ಟಿ ಆಯ್ಕೆ

02:51 PM Sep 15, 2017 | |

ಥಾಣೆ: ಮಾಜಿವಾಡಾ, ಭವಾನಿ ನಗರದ ಪ್ರತಿಷ್ಠಿತ ಶ್ರೀ ಆದಿಶಕ್ತಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಭಾಸ್ಕರ ಎಂ. ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲಾ ಸಭಾಂಗಣದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ನೇಮಿಸಲಾಯಿತು.

Advertisement

ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ವಾದಿರಾಜ ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಮನೋಹರ ಅಂಚನ್‌, ಜತೆ ಕಾರ್ಯದರ್ಶಿಯಾಗಿ ಹರೀಶ್‌ ಶೆಟ್ಟಿ ಹಾಗೂ ಜತೆ ಕೋಶಾಧಿಕಾರಿಯಾಗಿ ಏಕನಾಥ ಆಚಾರ್ಯ ಅವರನ್ನು ನೇಮಿಸಲಾಯಿತು.

ಸದಸ್ಯ ಬಾಂಧವರ ಒಮ್ಮತದ ಮೇರೆಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದ್ದು, ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯನ್ನು ನಿರ್ಗಮನ ಪದಾಧಿಕಾರಿಗಳು ಅಭಿನಂದಿಸಿ ಗೌರವಿಸಿ ಶುಭ ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next