Advertisement

ಭಾಸ್ಕರ ಶೆಟ್ಟಿ ಪ್ರಕರಣ: ರಾಜೇಶ್ವರಿ ಜಾಮೀನು ತಿರಸ್ಕರಿಸಿದ ಹೈಕೋರ್ಟ್‌

10:53 AM Apr 14, 2017 | Team Udayavani |

ಉಡುಪಿ: ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೇಶ್ವರಿ ಶೆಟ್ಟಿಯು ರಾಜ್ಯ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯಾಗಿ ಎ. 13ರಂದು ಆದೇಶ ಹೊರಬಿದ್ದಿದ್ದು, ಹೈಕೋರ್ಟಿನ ನ್ಯಾಯಮೂರ್ತಿ ಜ| ದಿನೇಶ್‌ ಅವರಿದ್ದ ಏಕಸದಸ್ಯ ಪೀಠವು ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿತು. 

Advertisement

ಸರಕಾರದ ಪರ ಅಡಿಶನಲ್‌ ಅಡ್ವೋಕೇಟ್‌ ಜನರಲ್‌ ಪೊನ್ನಣ್ಣ ಅವರು ವಾದ ಮಂಡಿಸಿದ್ದರು. 2ನೇ ಆರೋಪಿ ರಾಜೇಶ್ವರಿ ಶೆಟ್ಟಿಯ ಪುತ್ರ ನವನೀತ್‌ ಶೆಟ್ಟಿ ಜಾಮೀನು ಅರ್ಜಿ ಕೂಡ ಸಲ್ಲಿಕೆಯಾಗಿದ್ದು, ವಿಚಾರಣೆಗೆ ಬಾಕಿ ಇದೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಮತ್ತು ಸ್ವಯಂ ಘೋಷಿತ ಜೋತಿಷಿ ನಂದಳಿಕೆ ನಿರಂಜನ ಭಟ್ಟ ಅವರೆಲ್ಲರೂ ಮಂಗಳೂರು ಜೈಲಿನಲ್ಲಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next