Advertisement

Udupi ಉಚ್ಚಾಟಿಸಿದರೂ ಬಿಜೆಪಿ ಪ್ರೇಮ ಬಿಡದ ಭಟ್‌!

10:01 PM Jun 04, 2024 | Team Udayavani |

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆಗೊಂಡ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.

Advertisement

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ| ಬೃಜೇಶ್‌ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ.ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬಸವರಾಜ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್‌ ಶೆಟ್ಟರ್‌ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next