Advertisement

Bhatkal ಸರಕಾರಿ ಆಸ್ಪತ್ರೆ ವೈದ್ಯ ನಾಪತ್ತೆ; ದೂರು ದಾಖಲು

06:52 PM Oct 13, 2023 | Team Udayavani |

ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೋರ್ವರು ಮನೆಯಿಂದ ಕರ್ತವ್ಯಕ್ಕೆ ತೆರಳುತ್ತೇನೆಂದು ಹೋದವರು ಮೂರು ದಿನಗಳಾದರೂ ಕರ್ತವ್ಯಕ್ಕೂ ಹಾಜರಾಗದೇ, ಮನೆಗೂ ಬಾರದೇ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ನಾಪತ್ತೆಯಾದ ವೈದ್ಯರನ್ನು ಸರಕಾರಿ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಟಿ. ಉಮೇಶ ದೇವೆಂದ್ರಪ್ಪ (34) ಎಂದು ಗುರುತಿಸಲಾಗಿದೆ. ಇವರು ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ನಿಟ್ಟೂರಿನವರಾಗಿದ್ದು ಪ್ರಸ್ತುತ ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು. ಸಾಗರ ರಸ್ತೆಯ ದುರ್ಗಾಪರಮೇಶ್ವರಿ ಕಾಲೋನಿಯಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡು ಪತ್ನಿಯೊಂದಿಗೆ ವಾಸ ಮಾಡುತ್ತಿದ್ದರು.

ಅಕ್ಟೋಬರ್ 1೦ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯಿಂದ ಕರ್ತವ್ಯಕ್ಕೆ ಹೋಗುತ್ತೇನೆ ಎಂದು ಪತ್ನಿಯಲ್ಲಿ ಹೇಳಿ ಹೋದವರು ಸಂಜೆಯಾದರೂ ಮನೆಗೆ ಬಾರದೇ ಬಾರದೆಸಂಬಂಧಿಕರ ಮನೆಗೂ ಹೋಗದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಸತತ ಮೂರು ದಿನವಾದರು ಬಾರದೇ ಇದ್ದ ಹಿನ್ನೆಲೆ ನಾಪತ್ತೆಯಾಗಿದ್ದಾರೆಂದು ಶಂಕಿಸಿ ವೈದ್ಯರ ಪತ್ನಿ ಡಾ. ಪೂಜಾ ಎಚ್.ಟಿ.ಉಮೇಶ ಅವರು ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರನ್ನು ದಾಖಲಿಸಿಕೊಂಡ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next