Advertisement

ಭಟ್ಕಳ : ಸಮುದ್ರ ಬಳಿ ಜೋಡಿ ಶವ ಪತ್ತೆ|ಆತ್ಮಹತ್ಯೆ ಶಂಕೆ

05:52 PM Sep 18, 2021 | Team Udayavani |

ಭಟ್ಕಳ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Advertisement

ಮೃತರನ್ನು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳಾದ ಆದಿತ್ಯ ಬಿ.ಎಸ್. (45) ಹಾಗೂ ಲಕ್ಷ್ಮೀ ಬಿ. ಎಂದು ಅವರು ಹೊಂದಿದ್ದ ದಾಖಲೆಗಳಿಂದ ತಿಳಿದು ಬಂದಿದೆ. ಬೆಂಗಳೂರಿನಿಂದ ಬಂದಿದ್ದ ಇವರು ಹುಯಿಲುಮಡಿಗೆ ಹೋಗಿ 2-3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.  ಆಕೆಯನ್ನು ಮೊದಲು ಕೊಲೆ ಮಾಡಿ ಆತನು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎನ್ನುವ ಸಂಶಯ ಕೂಡಾ ಮೂಡುತ್ತಿದೆ.

ಲಕ್ಷ್ಮೀ ಬಿ ಶವ ಸಮುದ್ರದಂಚಿನಲ್ಲಿಯ ಬಂಡೆಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿದ್ದರೆ, ಆತನ ಶವ ಕುತ್ತಿಗೆಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿದೆ.  ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಬಂದಿದ್ದರೋ, ಆಕೆಯನ್ನು ಕರೆದುಕೊಂಡು ಬಂದು ಕೊಲೆ ಮಾಡಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

ಘಟನೆಯ ಸುದ್ದಿ ತಿಳಿದ ತಕ್ಷಣ ನೂರಾರು ಗ್ರಾಮಸ್ಥರು ಧಾವಿಸಿದ್ದು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next