Advertisement

ಭಟ್ಕಳ: ಖಚಿತ ಮಾಹಿತಿಯ ಮೇರೆಗೆ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಚಂದನ್ ಗೋಪಾಲ್ ಹಾಗೂ ಸಿಬ್ಬಂದಿಗಳು ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಹೆಗ್ಗಲ್ ಎನ್ನುವಲ್ಲಿನ ಗೋಡೌನ್ ಒಂದರ ಮೇಲೆ ದಾಳಿ ನಡೆಸಿ ಸುಮಾರು 102 ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ.

Advertisement

ಗುರುವಾರ ಮಧ್ಯಾಹ್ನ ದಾಳಿ ನಡೆಸಿದ ಇನ್ಸ್ಪೆಕ್ಟರ್ ಚಂದನ್ ಗೋಪಾಲ್ ಹಾಗೂ ಆಹಾರ ನಿರೀಕ್ಷಕ ಪಾಂಡು ನಾಯ್ಕ ಹಾಗೂ ಗ್ರಾಮೀಣ ಠಾಣೆಯ ಸಿಬ್ಬಂದಿಗಳು ಗೋಡೌನ್‌ನಲ್ಲಿದ್ದ ಅಕ್ಕಿಯನ್ನು ಪತ್ತೆ ಹಚ್ಚಿದ್ದು, ಆರೋಪಿಗಳಾದ ಗುಲಾಬ್ ಸಾಬ್, ಅಬ್ದುಲ್ ರೆಹಮಾನ್ ಹಾಗೂ ಇಮ್ತಿಯಾಜ್ ಎನ್ನುವವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಅಕ್ಕಿಯು ಒಟ್ಟು 50 ಕೆ.ಜಿ. ತೂಕದ 102 ಬ್ಯಾಗ್‌ಗಳು ಎಂದು ತಿಳಿಸಲಾಗಿದ್ದು ಇದರ ಮೂಲ ರೂವಾರಿ ನಿಶಾನ್ ಎನ್ನುವವನಾಗಿದ್ದು, ಎಲ್ಲಿಯವನು? ಎಲ್ಲಿಂದ ಅಕ್ಕಿಯನ್ನು ಇವರಿಗೆ ಸರಬರಾಜು ಮಾಡಲಾಗಿದೆ ಎನ್ನುವುದು ಇನ್ನಷ್ಟೇ ತನಿಖೆಯಿಂದ ಹೊರ ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next