Advertisement

Bhatkal: ನಾಮ ಪತ್ರ ಸಲ್ಲಿಸಿದ ಮಂಕಾಳ ವೈದ್ಯ ; ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ

10:49 PM Apr 17, 2023 | Team Udayavani |

ಭಟ್ಕಳ: ಮಾಜಿ ಶಾಸಕ ಮಂಕಾಳ ಎಸ್. ವೈದ್ಯ ಅವರು ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ತಾಲೂಕಾ ಆಡಳಿತ ಸೌಧಕ್ಕೆ ಬಂದು ಸಹಾಯಕ ಆಯುಕ್ತೆ ಹಾಗೂ ಚುನಾವಣಾಧಿಕಾರಿ ಮಮತಾದೇವಿ ಜಿ.ಎಸ್. ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಧೀಕೃತ ಬಿ ಫಾರ್ಮನೊಂದಿಗೆ ನಾಮ ಪತ್ರ ಸಲ್ಲಿಸಿದರು.

Advertisement

ಇದಕ್ಕೂ ಪೂರ್ವ ಅವರು ಮುರ್ಡೇಶ್ವರ ದೇವಸ್ಥಾನ, ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿ ನಂತರ ನಗರದ ಗ್ರಾಮ ದೇವತೆ ಹನುಮಂತ ದೇವಸ್ಥಾನಕ್ಕೆ ತೆರಳಿ ಸೇವೆ ಸಲ್ಲಿಸಿದ ನಂತರ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ನಾಮ ಪತ್ರ ಸಲ್ಲಿಸಿದರು.

ನಾಮ ಪತ್ರ ಸಲ್ಲಿಸುವ ವೇಳೆ ಪತ್ನಿ ಪುಷ್ಪಲತಾ ವೈದ್ಯ, ಹಿರಿಯರಾದ ಎಲ್.ಎಸ್.ನಾಯ್ಕ, ಆರ್. ಎಸ್. ರಾಯ್ಕರ್, ತಿಮ್ಮಪ್ಪ ಮೊಗೇರ ಇದ್ದರು. ಮೆರವಣಿಗೆಯ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಆಲ್ಬರ್ಟ ಡಿಕೋಸ್ತ, ತಾ.ಪಂ.ಮಾಜಿ ಅಧ್ಯಕ್ಷ ಎಲ್.ಎಸ್.ನಾಯ್ಕ, ಚಂದ್ರಶೇಖರ ಗೌಡ, ವಾಮನ ನಾಯ್ಕ, ವನಿತಾ ನಾಯ್ಕ, ಸಿಂಧು ಭಾಸ್ಕರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next