Advertisement

ಭವಾನಿ ಫೌಂಡೇಶನ್‌ ಮುಂಬಯಿ : ತೃತೀಯ ವಾರ್ಷಿಕ ರಕ್ತದಾನ ಶಿಬಿರ

03:01 PM Apr 01, 2018 | |

ಮುಂಬಯಿ: ಭವಾನಿ ಫೌಂಡೇಶನ್‌ ನವಿ ಮುಂಬಯಿ ಸಂಸ್ಥೆಯು ಫೋರ್ಟಿಸ್‌ ಹಾಸ್ಟಿಟಲ್‌ ಮುಂಬಯಿ ಸಹಯೋಗದೊಂದಿಗೆ ತೃತೀಯ ವಾರ್ಷಿಕ ರಕ್ತದಾನ ಶಿಬಿರವು ಮಾ. 31ರಂದು  ಪೂರ್ವಾಹ್ನ ನವಿ ಮುಂಬಯೀ  ಸಿಬಿಡಿ ಬೇಲಾಪುರದ ಟೈಮ್ಸ್‌ ಸ್ಕ್ವೇರ್‌ನ ಸಭಾಗೃಹದಲ್ಲಿ ನಡೆಯಿತು.

Advertisement

ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಹಾಗೂ ಭವಾನಿ ಫೌಂಡೇಶನ್‌ನ ಸಂಸ್ಥಾಪಕಾಧ್ಯಕ್ಷ‌ ದಡªಂಗಡಿ ಚೆಲ್ಲಡ್ಕ ಕುಸುಮೋದ‌ರ ದೇರಣ್ಣ ಶೆಟ್ಟಿ (ಕೆ. ಡಿ. ಶೆಟ್ಟಿ) ಅಧ್ಯಕ್ಷತೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಎನ್‌. ಎಸ್‌. ಲಾಜಿಸ್ಟಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಸಂತೋಷ್‌ ಶೆಟ್ಟಿ ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಅತಿಥಿ-ಗಣ್ಯರುಗಳಾಗಿ ಉದ್ಯಮಿ ರಾಘವ ರೈ, ಸಮಾಜ ಸೇವಕರುಗಳಾದ ಮುರಳೀಧರ್‌ ಪಾಲ್ವೆ ಭಿಲವಲೆ, ಭವಾನಿ ಫೌಂಡೇಶನ್‌ನ ಕಾರ್ಯಕಾರಿ ಸಮಿತಿಯ ಸದಸ್ಯ ಪಂಡಿತ್‌ ನ‌ವೀನ್‌ಚಂದ್ರ ಆರ್‌. ಸನೀಲ್‌, ಫೋರ್ಟಿಸ್‌ ಹಾಸ್ಟಿಟಲ್‌ನ ವೈದ್ಯಾಧಿಕಾರಿ ಡಾ| ಪ್ರದ್ಯಾ ಕರಾಟ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಧುನಿಕ ಯಾಂತ್ರಿಕ ಜೀವನದಲ್ಲಿ ಆರೋಗ್ಯದ ಕಾಳಜಿ ಮರೆಯಾಗುತ್ತಿದೆ. ನಿರ್ಲಕ್ಷ ಮತ್ತು ಅವಸರ ಪವೃತ್ತಿಯ ಜೀವನ ಐಲಿ ಶೈಲಿ ಅನಾರೋಗ್ಯಕ್ಕೆ ಕಾರಣವಾಗಿದೆ. ಆದುದರಿಂದ ಮಾನವನು ಪ್ರಕೃತಿಸಯ್ಯ ಜೀವನಕ್ಕೆ ಸ್ಪಂದಿಸುವ ಅಗತ್ಯವಿದೆ. ನಾವು ಆರೋಗ್ಯ ದಾಯಕರಾಗಿದ್ದರೆ ಮಾತ್ರ ಮತ್ತೂಬ್ಬರಿಗೆ ಜೀವದಾನ ನೀಡಲು ಸಾಧ್ಯ. ಆರೋಗ್ಯವಾಗಿದ್ದರೆ ಮಾತ್ರ ಮತ್ತೂಬ್ಬರ ಜೀವದಾನಕ್ಕೆ ರಕ್ತದಾನ ನೀಡಬಹುದು. ರಕ್ತದಾನ ಶಿಬಿರ ಸ್ವಸ್ಥ ಸಮಾಜಕ್ಕೆ ವರದಾನವಾಗಿದ್ದು, ರಕ್ತದಾನ ಮಾನವ ಪುನರುಜ್ಜೀವನಕ್ಕೆ ಪೂರಕವೂ ಹೌದು. ಇಂತಹ ವಿವಿಧ ಸೇವೆಗಳ ದಾನಕ್ಕೆ ಭವಾನಿ ಫೌಂಡೇಶನ್‌ನ ಸೇವೆ ಅನು ಪಮವೆಣಿಸಿದೆ ಎಂದು ಸಂತೋಷ್‌ ಶೆಟ್ಟಿ ಭವಾನಿ ಫೌಂಡೇ ಶನ್‌ನ ಸ್ವಸ್ಥ ಸಮಾಜದ ಕಾಳಜಿಯನ್ನು ಪ್ರಶಂಸಿಸಿದರು.

ಭವಾನಿ ಫೌಂಡೇಶನ್‌ನ ಸಂಸ್ಥಾಪಕಾಧ್ಯಕ್ಷ‌ ಕೆ. ಡಿ. ಶೆಟ್ಟಿ ಇವರು ಮಾತನಾಡಿ,  ನನ್ನ ಮಾತೆಯ ಅನುಗ್ರಹದಿಂದ ಇಂತಹ ಸಮಾಜ ಸೇವೆ ಸಾಧ್ಯವಾಗುತ್ತಿ¤ದೆ. ಜನನಿದಾತೆಯ ಕನಸು ಸೇವೆಯ ಮೂಲಕ ನನಸಾಗುತ್ತಿದೆ. ಸ್ವಸ್ಥ ಮತ್ತು ಸುಶಿಕ್ಷಿತ ಸಮಾಜದ ಆಶಯ ಭವಾನಿ ಫೌಂಡೇಶನ್‌ ಸಂಸ್ಥೆಯದ್ದಾಗಿದೆ. ಮಾನವ ಜೀವನ ಸಾರ್ಥಕತೆಯ ಸಾಧನಗಳಲ್ಲಿ ದಾನ ಅತಿ ಶ್ರೇಷ್ಠ ಸ್ಥಾನ ಪಡೆದಿದೆ. ಇಂತಹ ದಾನಗಳಿಗೆ ಹಲವು ರೂಪಗಳಿವೆ. ವಿವಿಧ ಪ್ರಕಾರಗಳನ್ನು ದಾನ ರೂಪದಲ್ಲಿ ಕಾಣಬಹುದು.  ನಿರಾಪೇಕ್ಷ ಮನೋ ಬುದ್ಧಿಯಿಂದ ಏನನ್ನಾದರೂ ಕೊಡುವುದೇ ದಾನದ ಗೂಡಾರ್ಥ. ಇದನ್ನೇ ಮಾದರಿಯನ್ನಾಗಿಸಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದೇವೆ. ಸಮಾಜ ಕಳಕಳಿ ಪ್ರತಿಯೋರ್ವನದ್ದಾಗ‌ಬೇಕು ಎನ್ನುವುದನ್ನು ಮನವರಿಕೆ ಮಾಡಬೇಕು ಅನ್ನುವುದೇ ನಮ್ಮ ಸದಾಶಯ. ಬಂಟ್ಸ್‌ ಸಂಘ ಮುಂಬಯಿ ನನಗೆ ಸೇವೆಗೆ ನೀಡಿದ ಪ್ರೋತ್ಸಾಹ, ಅವಕಾಶದ ಪರಿಣಾಮವಾಗಿ ನಾನು ಇಂತಹ ಸಾಧನೆಯನ್ನು ಯೋಚಿಸಲು ಸಾಧ್ಯವಾಗಿದೆ. ಭವಾನಿ ಪರಿವಾರ, ಪದಾಧಿಕಾರಿ, ಸದಸ್ಯರ ಸಹಯೋಗದಿಂದ ಸಂಸ್ಥೆ ಸೇವೆಗೆ ಮತ್ತಷ್ಟು ಉತ್ಸುಕವಾಗಿದೆ. ಸಾಧು ಸಂತರ ಮರಾಠಿ ಭೂಮಿಯಲ್ಲಿನ ಸೇವೆಯ ಫಲ ಎಂದೂ  ಮರೆಯಲಾಗದು. ಸೇವಾಕರ್ತರಿಗೆ ಸದಾ ಪ್ರತಿಫಲಿಸಬಲ್ಲದು. ಆದ್ದರಿಂದ ಸೇವಾ ಮುನ್ನಡೆಗೆ ಎಲ್ಲರ ಪ್ರೀತಿ ಸದಾ ನಮ್ಮಮೇಲಿದ್ದರೆ ಸಾಕು. ಅವಾಗಲೇ ನಮ್ಮ ಶ್ರಮ ಫಲದಾಯಕವಾಗ ಬಲ್ಲದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಫೋರ್ಟಿಸ್‌ ಹಾಸ್ಟಿಟಲ್‌ನ ರಕ್ತ ಸಂಗಹಣ ವಿಭಾಗೀಯ ಮುಖ್ಯಸ್ಥೆ ಶ್ರದ್ಧಾ ಖುಪ್‌ಕರ್‌, ಸಕಾಲ್‌ ಮೀಡಿಯಾ ಸಮೂಹದ ಉಪ ಮಹಾ ಪ್ರಬಂಧಕ ದಿನೇಶ್‌ ಎಸ್‌. ಶೆಟ್ಟಿ ಪಡುಬಿದ್ರೆ, ಸಮಾಜ ಸೇವಕ ಸಂಜಯ್‌ ಚವ್ಹಾಣ್‌ ಭಿಲವಲೆ, ಫೌಂಡೇಶನ್‌ನ   ವಿಶ್ವಸ್ತ ಸದಸ್ಯರು ಸರಿತಾ ಕುಸುಮೋದರ್‌ ಶೆಟ್ಟಿ, ಅಂಕಿತಾ ಜೆ. ಶೆಟ್ಟಿ, ಕೋಶಾಧಿಕಾರಿ ಚೈತಾಲಿ ಪೂಜಾರಿ,   ಕಾರ್ಯಕಾರಿ ಸಮಿತಿಯ ಸದಸ್ಯ ಪ್ರೇಮನಾಥ ಬಿ. ಶೆಟ್ಟಿ ಮುಂಡ್ಕೂರು ಮತ್ತಿತರರು ಉಪಸ್ಥಿತರಿದ್ದರು.

Advertisement

ಈ ಸಂದರ್ಭದಲ್ಲಿ ಸ್ಥಾನೀಯ ಅನೇಕ ಸಂಸ್ಥೆಗಳ ಪದಾಧಿಕಾರಿಗಳು, ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಸಂಸ್ಥೆಯ ಉನ್ನತಾಧಿಕಾರಿಗಳು, ಸಿಬ್ಬಂದಿಗಳು, ಶೆಟ್ಟಿ ಪರಿವಾರದ ಬಂಧು-ಮಿತ್ರರು, ಹಿತ ಚಿಂತಕರು ಸಹಿತ ನೂರಾರು ಮಂದಿ ಭಾಗವಹಿಸಿ ರಕ್ತದಾನಗೈದರು. ಫೋರ್ಟಿಸ್‌ ಆಸ್ಪತ್ರೆಯ ಸಂಜಯ್‌ ಚೌವ್ಹಾಣ್‌, ಮುರಳೀಧರ್‌ ಪಾಲ್ವೆ, ಎನ್‌. ಎಲ್‌. ಲಾಜಿಸ್ಟಿಕ್‌ ಕಾರ್ಯಾಧ್ಯಕ್ಷ ಸಂತೋಷ್‌ ಶೆಟ್ಟಿ, ಸುನೀಲ್‌ ಪಾಗೋರೆ, ರಮೇಶ್ವರ ರಾಜ್‌ಪುತ್‌, ಸುಚೀಂತ್ರ ದುರ್ಗುಡೆ, ಜಗಯ್‌ ಪಡ್ವಾಲೆ, ಅಜಯ್‌ ಸೂರಿ, ಎಸ್‌.ರಾಜಶ್ರೀ, ಆರ್‌. ಶಿಲ್ಪಾ, ಕೆ. ಅಶ್ವಿ‌ನಿ ರಕ್ತ ಸಂಗ್ರಹಕ್ಕೆ ಸಹಕರಿಸಿದರು.

ಫೌಂಡೇಶನ್‌ನ ಉಪಾಧ್ಯಕ್ಷ ಜೀಕ್ಷಿತ್‌ ಕುಸುಮೋದರ್‌ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಗೌರವ  ಪ್ರಧಾನ  ಕಾರ್ಯದರ್ಶಿ ರಾಜಲಕ್ಷ್ಮೀ ಸುಬ್ರಹ್ಮಣ್ಯಂ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಜತೆ ಕೋಶಾಧಿಕಾರಿ ನವೀನ್‌ ಸಂಜೀವ್‌ ಶೆಟ್ಟಿ, ರೊನಾಲ್ಡ್‌ ಥೋಮಸ್‌ ಅತಿಥಿಗಳನ್ನು ಪುಷ್ಪಗುತ್ಛವನ್ನಿತ್ತು  ಗೌರವಿಸಿದರು. ಸೀಮಾ ಪವಾರ್‌ ಇವರು ವೈದ್ಯರ ತಂಡವನ್ನು ಪರಿಚಯಿಸಿ ವಂದಿಸಿದರು. 

ಚಿತ್ರ -ವರದಿ : ರೋನ್ಸ್‌ ಬಂಟ್ವಾಳ್‌

Advertisement

Udayavani is now on Telegram. Click here to join our channel and stay updated with the latest news.

Next