Advertisement

ಭೀಮಾ ನೀರು ತಡೆಗೆ ಹೂಗಾರ ಮನವಿ

12:00 PM Mar 30, 2022 | Team Udayavani |

ಅಫಜಲಪುರ: ತಾಲೂಕಿನ ಘತ್ತರಗಿ ಗ್ರಾಮದಲ್ಲಿ ಭೀಮಾ ನದಿಗೆ ನಿರ್ಮಿಸಿರುವ ಭೀಮಾ ಬ್ರಿಡ್ಜ್ ಕಂ ಬ್ಯಾರೇಜ್‌ನಲ್ಲೀಗ ವಿದ್ಯುತ್‌ ಚಾಲಿತ ಗೇಟ್‌ ಅಳವಡಿಕೆ ಕಾಮಗಾರಿ ನಡೆದಿದ್ದರಿಂದ ಗೇಟ್‌ ಗಳನ್ನು ತೆಗೆಯಲಾಗಿದ್ದು, ನೀರು ವ್ಯರ್ಥವಾಗಿ ಹರಿಯುತ್ತಿದೆ. ಈ ನೀರನ್ನು ತಡೆಯಬೇಕು ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಮನವಿ ಮಾಡಿದರು.

Advertisement

ಸಿಂದಗಿ ತಾಲೂಕಿನ ರಾಂಪೂರದಲ್ಲಿರುವ ಕೃಷ್ಣ ಭಾಗ್ಯ ಜಲನಿಗಮ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯುತ್‌ ಚಾಲಿತ ಗೇಟ್‌ ಅಳವಡಿಕೆ ಮಾಡುತ್ತಿರುವುದು ಒಳ್ಳೆಯದೇ. ಆದರೆ ಈಗ ಬೇಸಿಗೆ ಇರುವುದರಿಂದ ನೀರು ಪೋಲಾಗಿ ಹರಿದು ಹೋದರೇ ದನ ಕರುಗಳಿಗೆ, ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗದೇ ಇರಲು ಹರಿದು ಹೋಗುತ್ತಿರುವ ನೀರನ್ನು ತಡೆದು ನಿಲ್ಲಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿಕೊಂಡರು. ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು, ರೈತ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next