Advertisement

ಅಬಕಾರಿ ಅಧಿಕಾರಿಯ ವರ್ತನೆಗೆ ಭೀಮನಹಳ್ಳಿ ಗ್ರಾಮಸ್ಥರ ಆಕ್ರೋಶ

12:03 PM Jan 23, 2022 | Team Udayavani |

ಚಿತ್ತಾಪುರ: ಅಕ್ರಮ ಕಳ್ಳಭಟ್ಟಿ ತಯಾರಿ ಮತ್ತು ಮಾರಾಟ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆಯಲು ಆಗಮಿಸಿದ್ದ ಅಬಕಾರಿ ಅಧಿಕಾರಿಯ ವರ್ತನೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಭೀಮನಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಡಂಗುರ ಸಾರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಹೇಳುತ್ತಿದ್ದಂತೆ ಅಬಕಾರಿ ಅಧಿಕಾರಿ ಹಲ್ಲೆಗೆ ಮುಂದಾದರು ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಬಕಾರಿ ಇಲಾಖೆ ವಾಹನಗಳಿಗೆ ಮುಳ್ಳು ಗಿಡಗಂಟಿ ಹಚ್ಚಿ ತಡೆದರು. ಅಲ್ಲದೇ ಸಿಬ್ಬಂದಿಗಳಿಗೆ ದಿಗ್ಬಂಧನ ಹಾಕಿದರು. ಬಳಿಕ ಅಬಕಾರಿ ಅಧಿಕಾರಿ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಯ್ತು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next