Advertisement

ಆರೋಗ್ಯ ಕಾರ್ಯಕ್ರಮ ಜನಜಾಗೃತಿ ವಸ್ತು ಪ್ರದರ್ಶನ

11:40 AM Sep 04, 2019 | Team Udayavani |

ಬೀದರ: ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು, ಕುಡಿಯುವ ನೀರು, ನೈರ್ಮಲ್ಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜನಜಾಗೃತಿ ವಸ್ತು ಪ್ರದರ್ಶನ ನಡೆಯಿತು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಎಂ.ಎ.ಜಬ್ಟಾರ ಜನಜಾಗೃತಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಳೆಗಾಲದಲ್ಲಿ ಸಹಜವಾಗಿ ಕೆಲವು ಖಾಯಿಲೆಗಳು ಬರುತ್ತವೆ. ಆದ್ದರಿಂದ ಡೆಂಘೀ, ಚಿಕೂನ್‌ ಗುನ್ಯದಂತಹ ಖಾಯಿಲೆಗಳು ಬಾರದಂತೆ ಜನರು ಜಾಗೃತಿ ವಹಿಸಬೇಕು. ಈ ಜನಜಾಗೃತಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ಹೆಚ್ಚು ರೀತಿಯಲ್ಲಿ ಮಾಹಿತಿ ಲಭ್ಯವಿದೆ. ಈ ಮಳಿಗೆಗೆ ಜನರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡಿ, ವಿವಿಧ ಆರೋಗ್ಯ ಯೋಜನೆ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಪ್ರಭಾರಿ ನಿಯಂತ್ರಣಾಧಿಕಾರಿ ಬಸವಂತಪ್ಪ, ಪ್ರಭಾರಿ ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ, ಆಪ್ತ ಸಹಾಯಕ ಪ್ರಭುಲಿಂಗ ಸ್ವಾಮಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಅನೀಲ ಚಿಂತಾಮಣಿ, ಡಾ| ರವೀಂದ್ರ ಸಿರಸಗೆ, ಡಾ| ರಾಜಶೇಖರ ಪಾಟೀಲ, ಡಾ| ಕೃಷ್ಣಾ ರೆಡ್ಡಿ, ಡಾ| ಶಿವಕುಮಾರ,ಡಾ| ಶಿವಶಂಕರ, ಡಾ| ಅಶೋಕ ಮೈಲಾರೆ, ಡಾ| ಶರಣಪ್ಪ ಮುಡಬಿ, ಡಾ| ಅನಿಲ ಚತುರೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುದಾಳೆ, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ವಿಜಯಕೃಷ್ಣ ಸೊಲಪುರ, ತನ್ವೀರ್‌ ಇಖ್ಬಾಲ್, ನರೇಶಕುಮಾರ, ಬಿಂದುಸಾರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next