Advertisement

ಮಳೆಯಿಲ್ಲದೇ ಕಾರಂಜಾ ಖಾಲಿಖಾಲಿ

10:42 AM Aug 30, 2019 | Team Udayavani |

ದುರ್ಯೋಧನ ಹೂಗಾರ
ಬೀದರ: ಬೀದರ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ(ಬಿ), ಭಾಲ್ಕಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕುಡಿವ ನೀರು ಪೂರೈಸುತ್ತಿರುವ ಕಾರಂಜಾ ಜಲಾಶಯದಲ್ಲಿ ನೀರಿನ ಒಳ ಹರಿವು ಇಲ್ಲದೆ ಬರಡಾಗಿದೆ.

Advertisement

ಸದ್ಯ ಜಿಲ್ಲೆಯಲ್ಲಿ ಶೇ.63 ಮಳೆ ಸುರಿದರೂ ಕಾರಂಜಾ ಜಲಾಶಯಕ್ಕೆ 0.143 ಟಿಎಂಸಿ ನೀರು ಮಾತ್ರ ಒಳಹರಿವು ಬಂದಿದೆ. ಒಟ್ಟಾರೆ 1.262 ಟಿಎಂಸಿ ನೀರು ಸಂಗ್ರಹ ಇದೆ. ಆದರೆ, 0.375 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿಲ್ಲ. ಸದ್ಯ 0.887 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಮುಂದಿನ ಚಳಿಗಾಲದಲ್ಲಿ ಭೀಕರ ಬರಗಾಲ ಸ್ಥಿತಿ ನಿರ್ಮಾಣಗೊಂಡು ಕುಡಿಯುವ ನೀರಿಗೆ ಜನರು ತತ್ತರಿಸುವ ಸ್ಥಿತಿ ಬಂದೊದಗಲಿದೆ. ಇನ್ನೂ ಒಂದು ತಿಂಗಳ ಕಾಲ ಮಳೆಗಾಲ ಇದ್ದು, ಉತ್ತಮ ಮಳೆ ಸುರಿದರೆ ಮಾತ್ರ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪುತ್ತದೆ.

ಬೀದರ, ಭಾಲ್ಕಿ, ಹುಮನಾಬಾದ, ಚಿಟಗುಪ್ಪ, ಹಳ್ಳಿಖೇಡ, ಔರಾದ ಸೇರಿದಂತೆ ವಿವಿಧೆಡೆಗಳಲ್ಲಿ ನೀರಿನ ಆಭಾವ ಹೆಚ್ಚಾಗುತ್ತಿದ್ದು, ಆಯಾ ಭಾಗದಲ್ಲಿನ ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಈ ವರ್ಷ ಸರಾಸರಿ 572 ಮಿ.ಮೀ. ಮಳೆಯ ಪೈಕಿ 362 ಮಿ.ಮೀ ಮಳೆಯಾಗಿದೆ. ಸದ್ಯಕ್ಕೆ ಶೇ. 37 ಮಳೆ ಕೊರತೆ ಜಿಲ್ಲೆಗೆ ಕಾಡುತ್ತಿದೆ. ಶೇ.63 ಮಳೆಯಾಗಿದ್ದರೂ ಕೂಡ ಅಂತರ್ಜಲದಲ್ಲಿ ನೀರಿಲ್ಲ.

ಮುಂದಿನ ಒಂದು ವಾರದಲ್ಲಿ ಮಳೆ ಸುರಿಯದಿದ್ದರೆ ಬೆಳೆಗಳು ಒಣಗುವ ಹಂತ ಶುರುವಾಗುತ್ತದೆ. ಬೆಳೆಗಳಲ್ಲಿ ಕೀಟಬಾಧೆ ಕಂಡು ಬರುತ್ತಿದ್ದು, ರೈತರು ಕಿಟನಾಶಕಗಳು ಬಳಸುತ್ತಿದ್ದಾರೆ. ಸೆಪ್ಟೆಂಬರ್‌ ತಿಂಗಳಲ್ಲಿ 170 ಮಿ.ಮೀ ಮಳೆ ಆಗಬೇಕಿದ್ದು, ಸೂಕ್ತ ಮಳೆ ಆದರೆ ಮಾತ್ರ ರೈತರ ಬೆಳೆಗಳು ಉತ್ತಮವಾಗಿ ಬೆಳೆಯುತ್ತವೆ ಎನ್ನುತ್ತಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಹೇಳುತ್ತಾರೆ.

ಮಳೆಗಾಲ ಮುಗಿಯುತ್ತ ಬಂದರೂ ಸೂಕ್ತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ರೈತರು ಕೂಡ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿನ ಕೊಳವೆಬಾವಿಗಳು ಬೋರಲು ಬಿದ್ದಿವೆ.ಸದ್ಯದ ಸ್ಥಿತಿಯಲ್ಲಿ ಬೆಳೆಗಳು ಉತ್ತಮವಾಗಿದ್ದು, ಮಳೆ ಕೊರತೆ ಮುಂದುವರಿದರೆ ಬೆಳೆಗಳ ಸ್ಥಿತಿಕೂಡ ಹಾಳಾಗುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.

Advertisement

ಜಿಲ್ಲೆಯಲ್ಲಿ ಈವರೆಗೆ ಶೆ. 37 ಮಳೆ ಕೊರತೆ ಇದೆ. ಜಿಲ್ಲೆಯ ವಿವಿಧೆಡೆ ಹೆಸರು ಬೆಳೆಗಳ ಕಟಾವು ನಡೆಯುತ್ತಿದೆ. ಅಲ್ಲದೆ, ರೈತರಿಂದ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕನಿಷ್ಠ 7,050 ರೂ. ಬೆಲೆ ನಿಗದಿ ಮಾಡುವಂತೆ ಹಾಗೂ ಜಿಲ್ಲೆಯಲ್ಲಿ 30 ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಸಿ.ವಿದ್ಯಾನಂದ,
 ಕೃಷಿ ಇಲಾಖೆ ಜಂಟಿ ನಿರ್ದೇಶಕ

 

Advertisement

Udayavani is now on Telegram. Click here to join our channel and stay updated with the latest news.

Next