Advertisement

KMF ಗೆ ಭೀಮಾ ನಾಯ್ಕ ಅಧ್ಯಕ್ಷ: ಅವಿರೋಧವಾಗಿ ಆಯ್ಕೆಗೊಂಡ ಸಿಎಂ ಸಿದ್ದು ಆಪ್ತ

08:40 PM Jun 21, 2023 | Team Udayavani |

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್‌)ನೂತನ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಬುಧವಾರ ನಡೆದ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆಗೆ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಆಗಿತ್ತು.

ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಭೀಮಾನಾಯ್ಕ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಭೀಮಾನಾಯ್ಕ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದರು. ಕೋಲಾರ -ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಮಾಲೂರು ಶಾಸಕ ನಂಜೇಗೌಡ ಕೂಡ ಕೆಎಂಎಫ್‌ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಇದ್ದರು. ಆದರೆ, ಭೀಮಾನಾಯ್ಕ ಪರ ಮುಖ್ಯಮಂತ್ರಿ ಒಲವು ಹೊಂದಿದ್ದರು.ಆದ್ದರಿಂದ ಕೆಎಂಎಫ್‌ ಅಧ¤ಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡದಂತೆ ನಂಜೇಗೌಡರ ಮನವೊಲಿಸಿದ್ದರು.

ಮತ್ತೂಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆ ಯಾರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ್ದರಿಂದ ಭೀಮಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭೀಮಾನಾಯ್ಕ ಅವಿರೋಧ ಆಯ್ಕೆ ಆಗುತ್ತಿದ್ದಂತೆ ಅವರ ಬೆಂಬಲಿಗರು ಕೆಎಂಎಫ್ ಮುಂಭಾಗ ಸಂಭ್ರಮಿಸಿ, ಶುಭಾಶಯಕೋರಿದರು. ಈ ಹಿಂದೆ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರ್ಕಾರವಿದ್ದಾಗ ಶಾಸಕರಾಗಿದ್ದ ಭೀಮಾನಾಯಕ್‌ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದರು.

ಸಿಎಂ ಜತೆಗೆ ಚರ್ಚಿಸಿ ಹಾಲಿನ ದರ ಏರಿಕೆ ತೀರ್ಮಾನ
ಹಾಲಿನ ದರ ಹೆಚ್ಚಳ ವಿಚಾರವಾಗಿ ಮುಖ್ಯಮಂತ್ರಿನ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಎಂಎಫ್ನ ನೂತನ ಅಧ್ಯಕ್ಷ ಭೀಮಾನಾಯ್ಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕ ಹಾಲು ಒಕ್ಕೂಟದಿಂದ ಬೆಲೆ ಏರಿಕೆ ಮಾಡುವಂತೆ ಮನವಿ ಬಂದಿದೆ. ರೈತರಿಗೆ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರೋತ್ಸಾಹಧನ ಮೊತ್ತವನ್ನು ಇನ್ನೂ 2 ರೂ. ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಆದ್ದರಿಂದ ಗ್ರಾಹಕರಿಗೆ ಮಾರಾಟ ಮಾಡುವ ನಂದಿನಿ ಹಾಲಿನ ಪ್ರತಿ ಲೀಟರ್‌ ಗೆ 5 ರೂ ಹೆಚ್ಚಳ ಮಾಡುವಂತೆ ಈಗಾಗಲೇ ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡಿದೆ ಎಂದರು. ಕೆಎಂಎಫ್‌ ಅಧ್ಯಕ್ಷರಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಹಾಗೂ ನನಗೆ ಬೆಂಬಲ ನೀಡಿರುವ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಸರ್ಕಾರದ ಮಾರ್ಗದರ್ಶನದ ಜತೆಗೆ ರೈತರ ಮತ್ತು ಗ್ರಾಹಕರ ಸಹಕಾರ ಕೋರುತ್ತೇನೆ. ನಂದಿನಿ ಹಾಲು ರಾಷ್ಟ್ರಮಟ್ಟದ ಬ್ರಾಂಡ್‌ ಆಗಿದೆ. ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನ ಕೆಎಂಎಫ್‌ ಮಾಡಲಿದೆ ಎಂದು ತಿಳಿಸಿದರು.

Advertisement

ಖರೀದಿ ದರ ಹೆಚ್ಚಳ ಬಗ್ಗೆ ಚರ್ಚೆ
ಸಹಕಾರ ಸಚಿವ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ ರೈತ ರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚ ಳದ ಬಗ್ಗೆ ಚರ್ಚೆ ನಡೆಸಲಾಗುವುದು. ಜತೆಗೆ ಗ್ರಾಹಕರಿಗೂ ನೀಡುವ ಹಾಲಿನ ದರದಲ್ಲೂ ಹೆಚ್ಚಳ ಮಾಡಬೇಕಾಗಿದೆ ಎಂದು ಹೇಳಿದರು. ಕೆಎಂಎಫ್‌ನ ನಂದಿನಿ ಹಾಲನ್ನು ಅಮೂಲ್‌ ಜೊತೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ. ನಾವು ನಮ್ಮ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಹೋದರೆ ನಮಗೆ ಒಳ್ಳೆಯ ಮಾರುಕಟ್ಟೆ ಇರುತ್ತದೆ. ಆ ನಿಟ್ಟಿನಲ್ಲಿಯೆ ಕೆಎಂಎಫ್ ಹೆಜ್ಜೆಯಿರಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next