Advertisement

ಉಡುಪಿ –ಚಿಕ್ಕಮಗಳೂರು ಕ್ಷೇತ್ರ ಭೋಜೇಗೌಡ ಜೆಡಿಎಸ್‌ ಅಭ್ಯರ್ಥಿ ?

01:00 AM Mar 14, 2019 | Team Udayavani |

ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಹಗ್ಗಜಗ್ಗಾಟದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. 

Advertisement

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ತುಲನೆ ಮಾಡಿದರೆ ಕಾಂಗ್ರೆಸ್‌ ಬಲಿಷ್ಠವಾಗಿರುವುದರಿಂದ ಕಾಂಗ್ರೆಸ್‌ನಿಂದ ಆಕ್ಷೇಪ ಕೇಳಿಬಂದಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಗಳು ಪ್ರತ್ಯೇಕವಾಗಿ ಬುಧವಾರ ಸಭೆ ಕರೆದು ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಿಲ್ಲೆಯಲ್ಲಿ ಒಂದೇ ಒಂದು ಪ್ರಮುಖ ಜನಪ್ರತಿನಿಧಿಗಳಿಲ್ಲದ ಜೆಡಿಎಸ್‌ಗೆ ಬಿಟ್ಟುಕೊಡುವುದರಲ್ಲಿ ಏನು ಅರ್ಥವಿದೆ ಎಂದು ಉಡುಪಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಚಿಕ್ಕಮಗಳೂರಿನಲ್ಲಿಯೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ. 
ಹೀಗೆ ಹೊಂದಾಣಿಕೆಯಾದಲ್ಲಿ ಕೆ. ಜಯಪ್ರಕಾಶ್‌ ಹೆಗ್ಡೆಯವರು ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಲಿದ್ದಾರೆಂಬ ಬಹುದಿನಗಳ ಊಹಾಪೋಹವನ್ನು ಹೆಗ್ಡೆಯವರು ಮತ್ತೂಮ್ಮೆ ಅಲ್ಲಗಳೆದಿದ್ದಾರೆ. ಹಾಗಿದ್ದರೆ ಜೆಡಿಎಸ್‌ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ. 

2014ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ವಿ.ಧನಂಜಯ ಕುಮಾರ್‌ ಇತ್ತೀಚಿಗೆ ನಿಧನರಾಗಿದ್ದಾರೆ. 2012ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಸ್‌.ಎಲ್‌. ಭೋಜೇಗೌಡರು ಪ್ರಸ್ತುತ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. 2009ರ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಿರಲಿಲ್ಲ. ಈ ಬಾರಿ ಭೋಜೇಗೌಡರೇ ಅಭ್ಯರ್ಥಿಯಾಗಬಹುದು ಎಂಬ ಮಾತು ಕೇಳಿಬರುತ್ತಿದೆ. 2014, 2012ರ ಚುನಾವಣೆಯಲ್ಲಿ ಜೆಡಿಎಸ್‌ ಕಡಿಮೆ ಮತಗಳನ್ನು ಪಡೆದು ಮೂರನೆಯ ಸ್ಥಾನದಲ್ಲಿತ್ತು. 

1952ರಿಂದಲೂ ಕಾಂಗ್ರೆಸ್‌ ಪಕ್ಷ ಈ ಲೋಕಸಭಾ ಸ್ಥಾನದಲ್ಲಿ ಸ್ಪರ್ಧಿಸುತ್ತಿತ್ತು. ಇದೇ ಮೊದಲ ಬಾರಿ ಕಾಂಗ್ರೆಸ್‌ ಸ್ಪರ್ಧಿಸದ ಲೋಕಸಭಾ ಚುನಾವಣೆ ಇದಿರಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next