Advertisement

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

08:56 PM May 17, 2021 | Team Udayavani |

ಭೋಪಾಲ: ದೋಸಿ ತಳಿಯ ಗೋವಿನ ಮೂತ್ರದ ಅರ್ಕವನ್ನು ಸೇವಿಸುವುದರಿಂದ ಕೊರೊನಾ ಸೋಂಕು ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬಹುದು. ಹೀಗೆಂದು ಭೋಪಾಲ ಕ್ಷೇತ್ರದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಹೇಳಿದ್ದಾರೆ.

Advertisement

“ನನಗೆ ಆರೋಗ್ಯಕ್ಕೆ ಸಂಬಂಧಿಸಿ ಹಲವು ಸಮಸ್ಯೆಗಳಿವೆ. ಅದಕ್ಕಾಗಿ ಗೋಮೂತ್ರದ ಅರ್ಕ ತೆಗೆದುಕೊಳ್ಳುತ್ತಿದ್ದೇನೆ. ಅದನ್ನು ತೆಗೆದುಕೊಳ್ಳುತ್ತಿರುವುದರಿಂದ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಇತರ ಔಷಧಗಳನ್ನು ಸ್ವೀಕರಿಸುತ್ತಿಲ್ಲ. ಇದರಿಂದಾಗಿಯೇ ನನಗೆ ಸೋಂಕು ಬಂದಿಲ್ಲ’ ಎಂದು ಹೇಳಿದ್ದಾರೆ.

ಗೋ ಮೂತ್ರ ಎನ್ನುವುದು ಜೀವ ರಕ್ಷಕ ಔಷಧ ಎಂದು ಸಂಸದೆ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ :ನಾರದ ಸ್ಟಿಂಗ್ ಪ್ರಕರಣ : ಟಿಎಂಸಿ ಮುಖಂಡರಿಗೆ ಜಾಮೀನು ನೀಡಿದ ಸಿಬಿಐ ನ್ಯಾಯಾಲಯ

Advertisement

Udayavani is now on Telegram. Click here to join our channel and stay updated with the latest news.

Next