Advertisement

ಲೈಂಗಿಕ ಕಿರುಕುಳ;ಬನಾರಸ್‌ ವಿವಿಗೆ ಮಸಿ ಬಳಿಯಲು ಹುನ್ನಾರ?

03:10 PM Sep 24, 2017 | Team Udayavani |

ವಾರಾಣಸಿ: ನಗರದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಶನಿವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. 

Advertisement

ಕ್ಯಾಂಪಸ್‌ನಲ್ಲಿದ್ದ ವಿದ್ಯಾರ್ಥಿನಿಗೆ ಬೈಕ್‌ನಲ್ಲಿ ಬಂದ ಮೂವರು ಯುವಕರು ಕಿರುಕುಳ ನೀಡಿ ಪರಾರಿಯಾಗಿದ್ದರು ಎಂದು ದೂರು ನೀಡಲಾಗಿದ್ದು, ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ವಿದ್ಯಾರ್ಥಿನಿಯನ್ನೇ ದೂರ ಲಾಗಿದೆ ಎಂದು ಪ್ರತಿಭಟನಾ ನಿರತ  ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಪ್ರತಿಭಟನೆ ವೇಳೆ ನೂರಾರು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಮೂವರು  ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ ಎಂದು ತಿಲಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ದಿನದಂದೆ  ಈ ಘಟನೆ ನಡೆದಿದ್ದು, ವಿವಿಗೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ವಿವಿಯ ಆಡಳಿತ ಮಂಡಳಿ ಹೇಳಿದೆ. 

Advertisement

Udayavani is now on Telegram. Click here to join our channel and stay updated with the latest news.

Next