Advertisement

Facebook ನಲ್ಲಿ ಪೋಸ್ಟ್ ಹಾಕಿ ಆತ್ಮಹತ್ಯೆಗೆ ಶರಣಾದ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ

09:59 AM Jul 29, 2024 | Team Udayavani |

ರಾಮನಗರ: ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿ ಹಿರಿಯ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

Advertisement

ಮೂಲತಃ ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ನಿವಾಸಿಯಾಗಿರುವ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಆತ್ಮಹತ್ಯೆಗೆ ಶರಣಾಗಿರುವ ಹಿರಿಯ ಪರಿಸರವಾದಿ.

ಭಾನುವಾರ ತಡ ರಾತ್ರಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಚನ್ನಪಟ್ಟಣ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿ ರೂಮ್ ಮಾಡಿಕೊಂಡಿದ್ದ ಪುಟ್ಟಸ್ವಾಮಿ ಅವರು ತನ್ನ ರೂಮ್ ನಲ್ಲೆ ನೇಣಿಗೆ ಶರಣಾಗಿದ್ದಾರೆ.

ತನ್ನ ಸ್ವಂತ ಹಣದಲ್ಲಿ ಹಲವಾರು ವನ ನಿರ್ಮಾಣ ಮಾಡಿದ್ದ ಪುಟ್ಟಸ್ವಾಮಿ ಸಾವಿರಾರು ಗಿಡ – ಮರಗಳನ್ನ ಬೆಳೆಸಿದ ಕೀರ್ತಿ ಇವರಿಗಿದೆ.

Advertisement

ಇದನ್ನೂ ಓದಿ: ನಿಫಾ ಸೋಂಕಿತ ರೋಗಿಯ ಆರೈಕೆ ಮಾಡಿ ತಾನೆ ಸೋಂಕಿಗೆ ತುತ್ತಾಗಿ ಕೋಮಾಕ್ಕೆ ಜಾರಿದ ಕಡಬದ ಯುವಕ

Advertisement

Udayavani is now on Telegram. Click here to join our channel and stay updated with the latest news.

Next