Advertisement

ರಾಜವರ್ಧನ್‌ ಕನಸಿನ ಬಿಚ್ಚುಗತ್ತಿ

09:43 AM May 06, 2019 | Hari Prasad |

‘ಬಿಚ್ಚು ಗತ್ತಿ’ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ಇದಕ್ಕೆ ಖ್ಯಾತ ಕಾದಂಬರಿಕಾರ ಬಿ.ಎಲ್‌.ವೇಣು ಚಿತ್ರಕತೆ ಬರೆದಿದ್ದಾರೆ. ಹರಿ ಸಂತೋಷ್‌ ಈ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದರು.

Advertisement

ಇನ್ನು ಬಿಚ್ಚುಗತ್ತಿ ಭರಮಣ್ಣ ನಾಯಕನಾಗಿ ಹಿರಿಯ ನಟ ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಅಭಿನಯುಸುತ್ತಿದ್ದು, ಹರಿಪ್ರಿಯ ಚಿತ್ರದ ನಾಯಕಿಯಾಗಿದ್ದಾರೆ. ಬಿಚ್ಚುಗತ್ತಿಯಲ್ಲಿ ಬಾಹುಬಲಿ ಖ್ಯಾತಿಯ ಪ್ರಭಾಕರ್‌, ಶ್ರೀನಿವಾಸ್‌ ಮೂರ್ತಿ, ಕಲ್ಯಾಣಿ, ಶಿವರಾಮ್‌, ರೇಖಾ, ರಮೇಶ್‌ ಪಂಡಿತ್‌ ಪ್ರಮುಖ ಪಾತ್ರಗಳಲ್ಲಿದ್ದಾರೆ. ಬಿಚ್ಚುಗತ್ತಿ ಚಿತ್ರವು ಶ್ರೀ ಕೃಷ್ಣ ಪ್ರೊಡಕ್ಷನ್‌ ನಲ್ಲಿ ನಿರ್ಮಾಣವಾಗುತ್ತಿದೆ.

ಅಂದ ಹಾಗೆ ಕೆ.ಎಂ. ಪ್ರಕಾಶ್‌ ಸಂಕಲನದ ಜವಾಬ್ದಾರಿಯನ್ನು ವಸಿಕೊಂಡಿದ್ದು, ಎಡ್ವರ್ಡ್‌ ಕೆನಡಿ ಕಲಾ ನಿರ್ದೇಶಕರಾಗಿ ಬಿಚ್ಚುಗತ್ತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಹಂಸಲೇಖ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next