Advertisement

ಘೋಡ್ಕೆಗೆ ಸಿಜಿಕೆ ಪ್ರಶಸ್ತಿ ಪ್ರದಾನ

04:41 PM Jul 01, 2020 | Naveen |

ಬೀದರ: ಕರ್ನಾಟಕ ಬೀದಿ ನಾಟಕ ಅಕಾಡೆಮಿ ಮತ್ತು ಆರ್ಟ್‌ ಫೌಂಡೇಶನ್‌ನಿಂದ ಕೊಡ ಮಾಡುವ ಜಿಲ್ಲಾ ಮಟ್ಟದ ಸಿಜಿಕೆ ಪ್ರಶಸ್ತಿಯನ್ನು ಜಿಲ್ಲೆಯ ಕೋಹಿನೂರವಾಡಿಯ ಜನಪದ ಕಲಾವಿದ ಮಧುಕರ ನರಸಿಂಗರಾವ್‌ ಘೋಡ್ಕೆ ಅವರಿಗೆ ಪ್ರದಾನ ಮಾಡಲಾಯಿತು.

Advertisement

ನಗರದ ರಂಗ ಮಂದಿರದಲ್ಲಿ ಜಿಲ್ಲಾ ಜನಪದ ಕಲಾವಿದರ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಂಡೆಪ್ಪ ಖಾಸೆಂಪುರ ಪ್ರಶಸ್ತಿ ಪ್ರದಾನ ಮಾಡಿದರು. ಕಲಾವಿದ ಮಹೇಶ ಪಾಟೀಲ ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಜನಪದ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಮಧುಕರ ಘೋಡ್ಕೆ ದೇಶದ ವಿವಿಧೆಡೆ 2 ಸಾವಿರಕ್ಕೂ ಅಧಿಕ ಕಾರ್ಯಕ್ರಮ ನೀಡಿದ್ದಾರೆ. ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸದ ವಿಷಯ ಎಂದರು.

ಶಾಸಕರಾದ ರಹೀಮ್‌ ಖಾನ್‌, ಬಿ. ನಾರಾಯಣರಾವ್‌, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಪತ್ರಕರ್ತ ಎಂ.ಪಿ. ಮುಂದಾಳೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next