Advertisement

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

08:01 PM Mar 24, 2024 | Team Udayavani |

ಬೀದರ್ : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಪ್ರಾಥಮಿಕ ಸದಸ್ಯರೂ ಇಲ್ಲದ, ಮನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ ಮಕ್ಕಳು, ಪತ್ನಿ ಮತ್ತು ಸೊಸೆಯನ್ನು ಬೀದಿಗೆ ತಂದಿದ್ದಾರೆ. ಕಾಂಗ್ರೆಸ್ ಯೋಗ್ಯತೆಗೆ ಯಾರೂ ಕಾರ್ಯಕರ್ತರು ಸಿಗಲಿಲ್ಲವೇ? ಎಂದು ವಿಪಕ್ಷ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.

Advertisement

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ರಾಜ್ಯದ 20 ಜನ ಮಂತ್ರಿಗಳು ಕಾಂಗ್ರೆಸ್ಸಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಯಾರೊಬ್ಬ ಸಚಿವರು ಸಹ ಸ್ಪರ್ಧೆಗೆ ಧೈರ್ಯ ಮಾಡಲಿಲ್ಲ. ಕಾರ್ಯಕರ್ತರು ಸಹ ಸಿಗಲಿಲ್ಲ. ಹಾಗಾಗಿ ಗತಿ ಇಲ್ಲದೇ ಕುಟುಂಬದ ಸದಸ್ಯರ ಹೆಸರನ್ನು ಘೊಷಿಸಿದ್ದಾರೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ300 ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದ ಪಕ್ಷ ಅದನ್ನು ಸಾಧಿಸಿತ್ತು. ಈ ಬಾರಿ ಪ್ರಧಾನಿ ಮೋದಿ 400ರ ಟಾರ್ಗೆಟ್ ನೀಡಿದ್ದು, ಅದನ್ನು ತಲುಪುತ್ತೇವೆ ಎಂದು ವಿಶ್ವಾಸ ಇದೆ. ಕಳೆದ ಎರಡು ಚುನಾವಣೆಗಳಲ್ಲಿ ವಿರೋಧ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಹ ಕಾಂಗ್ರೆಸ್‌ಗೆ ಯೋಗ್ಯತೆ ಸಿಗಲಿಲ್ಲ. ಈಗಲೂ ಅದೇ ಸ್ಥಿತಿ ಮರುಕಳಿಸಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಈ ಬಾರಿ ಎಲ್ಲ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಗೆಲ್ಲಲಿದೆ. ಕಳೆದ ಬಾರಿ ಒಂದು ಸ್ಥಾನ ದೃಷ್ಟಿಗಾಗಿ ಬಿಟ್ಟುಕೊಟ್ಟಿದ್ದೇವು. ಆದರೆ, ಈ ಬಾರಿ ಆ ಸ್ಥಾನವೂ ಬಿಜೆಪಿ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಶೋಕ್, ಮೈತ್ರಿ ಧರ್ಮ ಪಾಲನೆಯಿಂದಾಗಿ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಡಬೇಕಾಯಿತು ಎಂದು ಹೇಳಿದರು.

ವೇದಿಕೆಯಲ್ಲಿ ಚರ್ಚೆ ಮಾಡಿಲ್ಲ

Advertisement

ಕೆ.ಎಸ್ ಈಶ್ವರಪ್ಪ ಬಿಜೆಪಿಯ ಹಳೆ ಕಾರ್ಯಕರ್ತರು. ಯಾರೇ ಅಸಮಾಧಾನಿತರು ಸಹ ಬಿಜೆಪಿ ಪಕ್ಷ ಅಥವಾ ಪ್ರಧಾನಿಯನ್ನು ದೂಷಿಸುತ್ತಿಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ಅವರ ಆಶಯ. ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರಿಬ್ಬರು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿಲ್ಲ, ಅದು ನಾಲ್ಕು ಗೋಡೆಗಳ ಮಧ್ಯೆ ನಡೆದಿದ್ದು, ಅಲ್ಲಿಯೇ ಪರಿಹಾರವೂ ಆಗಲಿದೆ. ಒಂದು ವಾರದ ನಂತರ ಎಲ್ಲರೂ ಬಿಜೆಪಿ ಜತೆ ಇರುತ್ತಾರೆ. ಇನ್ನೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸುಮಲತಾ ಮತ್ತು ಕರಡಿ ಸಂಗಣ್ಣ ಅವರು ಸೋಮವಾರ ಭೇಟಿಯಾಗಲಿದ್ದು, ಅವರ ಮನವೊಲಿಕೆ ಸಫಲವಾಗಲಿದೆ. ಬೀದರ ಕ್ಷೇತ್ರದಲ್ಲಿ ಸಂಧಾನ ಮಾಡುವಂಥ ಸ್ಥಿತಿ ಏನಿಲ್ಲ, ಎಲ್ಲ ಭಿನ್ನಮತ ಶಮನವಾಗಿದೆ.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ, ಅವಿನಾಶ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಗುತ್ತೇದಾರ್, ಎಂ.ಜಿ ಮೂಳೆ, ಅಮರನಾಥ ಪಾಟೀಲ, ಈಶ್ವರಸಿಂಗ್ ಠಾಕೂರ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next