Advertisement

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

11:36 PM Apr 29, 2024 | Team Udayavani |

ಬೀದರ್: ಹಣ ಹಂಚುತ್ತಿದ್ದಾರೆಂಬ ದೂರು ಹಿನ್ನಲೆ ಡಿಸಿಸಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ಔರಾದ‌ ಪಟ್ಟಣದ ನಿವಾಸದ ಮೇಲೆ‌‌ ಅಧಿಕಾರಿಗಳ ತಂಡ‌ ಭೇಟಿ ನೀಡಿ‌ ಪರಿಶೀಲನೆ ನಡೆಸಿದೆ. ಆದರೆ, ಯಾವುದೇ ಹಣ ಸಿಕ್ಕಿಲ್ಲ.

Advertisement

ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಚುನಾವಣ ಪ್ರಚಾರದಲ್ಲಿ ಸಕ್ರೀಯರಾಗಿದ್ದಾರೆ. ಸೋಮವಾರ ಸಂಜೆ 9 ರ‌ ಸುಮಾರಿಗೆ ಉಮಾಕಾಂತ ಅವರ ನಿವಾಸದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ನಿಂತಿದ್ದು, ಹಣ ಹಂಚುತ್ತಿರುವ ಬಗ್ಗೆ ಅನುಮಾನ ಇರುವ ಬಗ್ಗೆ ಜಿಲ್ಲಾ ಚುವಣಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು.

ಅದರಂತೆ‌ ಸಹಾಯಕ ಚುನಾವಣಾಧಿಕಾರಿ ನೇತೃತ್ವದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಅಬಕಾರಿ ಅಧಿಕಾರಿಗಳ ತಂಡ ಮನೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದೆ. ಆದರೆ, ಮನೆಯಲ್ಲಿ‌ ಯಾವುದೇ ಹಣ ಸಿಕ್ಕಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವೇಳೆ ಉಮಾಕಾಂತ ನಾಗಮಾರಪಳ್ಳಿ ಅವರು ಮನೆಯಲ್ಲಿಯೇ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next