Advertisement

ಅಂಗಡಿ ಮಂಜೂರಾತಿಗೆ ವಿಳಂಬ : ವ್ಯಕ್ತಿಯಿಂದ ಅಧಿಕಾರಿಗಳ ಕಚೇರಿಯಲ್ಲೇ ಆತ್ಮಹತ್ಯೆ ಯತ್ನ

08:56 PM May 02, 2022 | Team Udayavani |

ಬೀದರ್ : ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ನೊಂದು ವ್ಯಕ್ತಿಯೊಬ್ಬರು ನಗರದ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣಣದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕರ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ಔರಾದ ತಾಲೂಕಿನ ಕೊಳ್ಳುರ್ ಗ್ರಾಮದ ಶಿವಾಜಿ ಎಂಬಾತ ವಿಷ ಸೇವನೆ ಮಾಡಿದ್ದು, ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. 2021ರಲ್ಲಿ ನ್ಯಾಯಬೆಲೆ ಅಂಗಡಿ ಮಂಜೂರಿಗಾಗಿ ಶಿವಾಜಿ ಅವರು ಅರ್ಜಿ ಸಲ್ಲಿಸಿದ್ದು, ಪದೇ ಪದೆ ಕಚೇರಿಗೆ ಬಂದು ವಿಚಾರಣೆ ನಡೆಸುತ್ತಿದ್ದರು. ಇತ್ತೀಚೆಗೆ ಕಚೇರಿಗೆ ಬಂದು ನ್ಯಾಯಬೆಲೆ ಅಂಗಡಿ ಮಂಜೂರು ಕುರಿತು ಅಧಿಕಾರಿಗಳಿಗೆ ಪ್ರಶ್ನಿಸಿ, ನಾನು ವಿಷ ಸೇವನೆ ಮಾಡಿದ್ದೇನೆ ಎಂದಿದ್ದಾರೆ.

ಈ ವೇಳೆ ಗಲಿಬಿಲಿಗೊಂಡ ಕಚೇರಿಯ ಅಧಿಕಾರಿಗಳು ತಕ್ಷಣ ಶಿವಾಜಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಇಲಾಖೆ ಉಪ ನಿರ್ದೇಶಕ ಬಾಬುರಡ್ಡಿ ಮಾರ್ಕೆಟ್ ಠಾಣೆಗೆ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next