Advertisement

ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ‌ ಕೋವಿಡ್-19 ಪಾಸಿಟಿವ್

01:51 PM Sep 03, 2020 | keerthan |

ಬೀದರ್: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಡಪಟ್ಟಿದೆ.

Advertisement

ಕಳೆದ ಮೂರು ತಿಂಗಳಿಂದ ರಾಮಚಂದ್ರನ್ ಅವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಸಿಗುವುದು ಸೇರಿದಂತೆ ಈ ವಿಪತ್ತಿನ ಪರಿಸ್ಥಿತಿಯ ನಿರ್ವಹಣಾ ಕಾರ್ಯದಲ್ಲಿ ನಿರತರಾಗಿದ್ದರು.

ಈ ವೇಳೆ ಯಾರದೋ ಸಂಪರ್ಕದಿಂದ ಇವರಿಗೆ ಸೋಂಕು ಅಂಟಿದೆ‌. ಇವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎನ್ನಲಾಗಿದ್ದು,‌ ಬ್ರಿಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next