Advertisement

ಸ್ನಾನಕ್ಕೆ ತೆರಳಿದ್ದ ದಂಪತಿ ನೀರು ಪಾಲು

06:43 PM Jul 05, 2021 | Team Udayavani |

ಕಮಲನಗರ : ತಾಲೂಕಿನ ಸಂಗಮ ಗ್ರಾಮ ಸಮೀಪದ ಮಾಂಜ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ದಂಪತಿಗಳು ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಮಹಾರಾಷ್ಟ್ರದ ಉದಗೀರ ಪಟ್ಟಣದ ಚಂದ್ರಕಾಂತ ಅಮೃತಪ್ಪ (55), ರಾಜೇಶ್ವರಿ ಚಂದ್ರಕಾಂತ (50) ಮೃತ ದಂಪತಿಗಳು. ಕಾರಿನಲ್ಲಿ ಬಂದಿದ್ದ ಪತಿ- ಪತ್ನಿ ಮಾಂಜ್ರಾ ನದಿಯಲ್ಲಿ ಸ್ನಾನ ಮಾಡಿ ಪೂಜೆ ಮಾಡಿಕೊಂಡು ಬರುವುದಾಗಿ ವಾಹನ ಚಾಲಕನಿಗೆ ಹೇಳಿದ್ದಾರೆ. ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಕೋವಿಡ್ ಸಾವಿನ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಳ್ಳು ಲೆಕ್ಕ ನೀಡುತ್ತಿದೆ : ಖಂಡ್ರೆ

ಮೃತ ದುರ್ದೈವಿಗಳಿಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಕ್ಕಳು ಇದ್ದಾರೆ. ಘಟನಾ ಸ್ಥಳಕ್ಕೆ ಠಾಣಾಕುಶನೂರ ಠಾಣೆಯ ಪಿಎಸ್‌ಐ ರೇಣುಕಾ, ಎಎಸ್‌ಐ ಚಂದ್ರಕಾಂತ, ಪಿ.ಸಿ ವಿಜಯಕುಮಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರ ಪುತ್ರನ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ :  ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಾಂಗ್ರೆಸ್‌ ನೆರವು

Advertisement
Advertisement

Udayavani is now on Telegram. Click here to join our channel and stay updated with the latest news.

Next